ಮಮತಾ ಬ್ಯಾನರ್ಜಿ 
ದೇಶ

ಶೀಘ್ರದಲ್ಲೇ ದೇಶದಲ್ಲಿ ಯಾವುದೇ ಮಾಧ್ಯಮ ಇರುವುದಿಲ್ಲ: ಬಿಬಿಸಿ ಮೇಲೆ ಐಟಿ ದಾಳಿಗೆ ಮಮತಾ ಕಿಡಿ

ಬಿಬಿಸಿ ಇಂಡಿಯಾದ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಸಮೀಕ್ಷೆ(ದಾಳಿ) ಅತ್ಯಂತ ದುರದೃಷ್ಟಕರ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಸೇಡು...

ಕೋಲ್ಕತಾ: ಬಿಬಿಸಿ ಇಂಡಿಯಾದ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಸಮೀಕ್ಷೆ(ದಾಳಿ) ಅತ್ಯಂತ ದುರದೃಷ್ಟಕರ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಸೇಡು ಎಂದು ಆರೋಪಿಸಿದ್ದಾರೆ.

"ಇದು ಅತ್ಯಂತ ದುರದೃಷ್ಟಕರ; ಇದು ಬಿಜೆಪಿ ಸರ್ಕಾರದ ರಾಜಕೀಯ ಸೇಡಿನ ಕ್ರಮವಾಗಿದೆ" ಎಂದು ಪಶ್ಚಿಮ ಬಂಗಾಳ ಅಸೆಂಬ್ಲಿಯಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

"ಇಂತಹ ಕ್ರಮಗಳು ಪತ್ರಿಕಾ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತವೆ, ಕೇಸರಿ ಪಕ್ಷವು ಮಾಧ್ಯಮವನ್ನು ನಿಯಂತ್ರಿಸುತ್ತಿದೆ. ಒಂದು ದಿನ ದೇಶದಲ್ಲಿ ಮಾಧ್ಯಮವೇ ಇಲ್ಲದಂತೆ ಮಾಡುತ್ತಾರೆ. ಅವರು(ಬಿಜೆಪಿ ನಾಯಕರು) ಜನಾದೇಶದ ಬಗ್ಗೆ ಕಾಳಜಿ ವಹಿಸುವುದಿಲ್ಲ, ಅವರ ಏಕೈಕ ಜನಾದೇಶ ಸರ್ವಾಧಿಕಾರ. . (ಅವರು) ಹಿಟ್ಲರ್‌ಗಿಂತ ಹೆಚ್ಚು" ಪಶ್ಚಿಮ ಬಂಗಾಳ ಸಿಎಂ ವಾಗ್ದಾಳಿ ನಡೆಸಿದರು.

ಭಾರತದಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟರ್ ವಿರುದ್ಧ ಆಪಾದಿತ ತೆರಿಗೆ ವಂಚನೆಯ ತನಿಖೆಯ ಭಾಗವಾಗಿ ತೆರಿಗೆ ಇಲಾಖೆಯು ಮಂಗಳವಾರ ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಸಮೀಕ್ಷೆಯನ್ನು ಪ್ರಾರಂಭಿಸಿದೆ. ಬುಧವಾರವೂ ಐಟಿ ಕಾರ್ಯಾಚರಣೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಸಿದ್ದರಾಮಯ್ಯ ಮಾಹಿತಿ; ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT