ಪ್ರಾತಿನಿಧಿಕ ಚಿತ್ರ 
ದೇಶ

ಋತುಚಕ್ರದ ರಜೆ ಕೋರಿ ಮನವಿ: ಫೆಬ್ರುವರಿ 24 ರಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ

ಭಾರತದಾದ್ಯಂತ ಎಲ್ಲಾ ಉದ್ಯೋಗಸ್ಥ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಫೆಬ್ರುವರಿ 24 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ನವದೆಹಲಿ: ಭಾರತದಾದ್ಯಂತ ಎಲ್ಲಾ ಉದ್ಯೋಗಸ್ಥ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಫೆಬ್ರುವರಿ 24 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಅವರು ಸಲ್ಲಿಸಿದ ಮನವಿಯನ್ನು ಸಿಜೆಐ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿಎಸ್ ನರಸಿಂಹ ಅವರ ಪೀಠದ ಮುಂದೆ ಉಲ್ಲೇಖಿಸಲಾಗಿದೆ.

ತ್ರಿಪಾಠಿ ಅವರು ತಮ್ಮ ಮನವಿಯಲ್ಲಿ, 'ಮುಟ್ಟಿನ ಅವಧಿಯನ್ನು ಸಮಾಜ, ಸರ್ಕಾರ ಮತ್ತು ಇತರರಿಂದ ಹೆಚ್ಚಾಗಿ ಕಡೆಗಣಿಸಲಾಗಿದೆ. ಆದರೆ, ಕೆಲವು ಸಂಸ್ಥೆಗಳು ಮತ್ತು ರಾಜ್ಯ ಸರ್ಕಾರಗಳು ಇದಕ್ಕೆ ಮಾನ್ಯತೆ ನೀಡಿವೆ. ಉಳಿದ ರಾಜ್ಯಗಳಲ್ಲಿ ಮಹಿಳೆಯರಿಗೆ ಋತುಚಕ್ರದ ನೋವಿನ ರಜೆ ಅಥವಾ ಮುಟ್ಟಿನ ರಜೆಯನ್ನು ನಿರಾಕರಿಸುವುದು ಸಂವಿಧಾನದ 14ನೇ ಪರಿಚ್ಛೇದದ ಅಡಿಯಲ್ಲಿ ಅವರ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗಿದೆ' ಎಂದು ತಿಳಿಸಿದ್ದಾರೆ.

'ತಾಯ್ತನದ ವಿವಿಧ ಭಾಗಗಳಲ್ಲಿ ಅಥವಾ ಹಂತಗಳಲ್ಲಿ ಮಹಿಳೆಯರು ಋತುಚಕ್ರದ ಅವಧಿ, ಗರ್ಭಧಾರಣೆ, ಗರ್ಭಪಾತ ಅಥವಾ ಹೆರಿಗೆಯ ಈ ಹಂತಗಳಿಗೆ ಸಂಬಂಧಿಸಿದ ಯಾವುದೇ ವೈದ್ಯಕೀಯ ತೊಡಕುಗಳಿಗೆ ಒಳಗಾಗಿ ಹಲವಾರು ದೈಹಿಕ ಮತ್ತು ಮಾನಸಿಕ ತೊಂದರೆಗಳಿಗೆ ಒಳಗಾಗುತ್ತಾರೆ' ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮಾಸಿಕ ರಜೆಯನ್ನು ಕೋರುವುದರ ಜೊತೆಗೆ ವಕೀಲ ತ್ರಿಪಾಠಿ ಅವರು ತಮ್ಮ ಮನವಿಯಲ್ಲಿ, ಹೆರಿಗೆ ಪ್ರಯೋಜನ ಕಾಯ್ದೆ 1961ರ ಸೆಕ್ಷನ್ 14ರ ಅನುಸಾರವಾಗಿ ಕೆಲಸದ ಸ್ಥಳಗಳಲ್ಲಿ ಮಹಿಳಾ ವಿದ್ಯಾರ್ಥಿಗಳು ಮತ್ತು ಕಾರ್ಮಿಕ ವರ್ಗದ ಮಹಿಳೆಯರಿಗೆ ಮುಟ್ಟಿನ ನೋವಿನ ರಜೆಗಾಗಿ ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.

'ಮುಟ್ಟಿನ ನೋವಿನ ರಜೆಯ ಪರಿಕಲ್ಪನೆಯನ್ನು ಪರಿಹರಿಸಲು ಶಾಸಕಾಂಗದ ಇಚ್ಛಾಶಕ್ತಿಯ ಕೊರತೆ ಕಾಣುತ್ತಿದೆ. ಯುನೈಟೆಡ್ ಕಿಂಗ್‌ಡಮ್, ಚೀನಾ, ಜಪಾನ್, ತೈವಾನ್, ಇಂಡೋನೇಷಿಯಾ, ದಕ್ಷಿಣ ಕೊರಿಯಾ, ಸ್ಪೇನ್ ಮತ್ತು ಜಾಂಬಿಯಾ ಸೇರಿದಂತೆ ಇತರ ಹಲವಾರು ದೇಶಗಳಲ್ಲಿ ಈಗಾಗಲೇ ಈ ನಿಯಮ ಜಾರಿಯಲ್ಲಿದ್ದು, ಮುಟ್ಟಿನ ರಜೆಯನ್ನು ನೀಡಲಾಗುತ್ತಿದೆ. ಹೀಗಾಗಿ, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಮಧ್ಯಸ್ಥಿಕೆ ವಹಿಸಬೇಕು' ಎಂದು ಮನವಿಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT