ಸುಪ್ರೀಂ ಕೋರ್ಟ್-ಆರ್ ಎಸ್ಎಸ್ 
ದೇಶ

ಭಾರತ ವಿರೋಧಿ ಶಕ್ತಿಗಳಿಂದ ಸಾಧನವಾಗಿ 'ಸುಪ್ರೀಂ ಕೋರ್ಟ್' ಬಳಕೆ: ಬಿಬಿಸಿ ಡಾಕ್ಯುಮೆಂಟರಿ ನೊಟೀಸ್ ಬಗ್ಗೆ ಆರ್ ಎಸ್ಎಸ್

ಸುಪ್ರೀಂ ಕೋರ್ಟ್ ನ್ನು ಭಾರತ ವಿರೋಧ ಶಕ್ತಿಗಳು ಸಾಧನವಾಗಿ ಬಳಕೆ ಮಾಡಿಕೊಳ್ಳುತ್ತಿವೆ ಎಂದು ಆರ್ ಎಸ್ ಎಸ್ ನ ಸಾಪ್ತಾಹಿಕ ಪತ್ರಿಕೆ ಪಾಂಚಜನ್ಯ ಬರೆದಿದೆ. 

ನವದೆಹಲಿ: ಸುಪ್ರೀಂ ಕೋರ್ಟ್ ನ್ನು ಭಾರತ ವಿರೋಧ ಶಕ್ತಿಗಳು ಸಾಧನವಾಗಿ ಬಳಕೆ ಮಾಡಿಕೊಳ್ಳುತ್ತಿವೆ ಎಂದು ಆರ್ ಎಸ್ ಎಸ್ ನ ಸಾಪ್ತಾಹಿಕ ಪತ್ರಿಕೆ ಪಾಂಚಜನ್ಯ ಬರೆದಿದೆ. 

ಪ್ರಧಾನಿ ಮೋದಿ ಕುರಿತ ಬಿಬಿಸಿ ಡಾಕ್ಲ್ಯುಮೆಂಟರಿ ಲಿಂಕ್ ನ್ನು ಸಾಮಾಜಿಕ ಜಾಲತಾಣಗಳಲ್ಲಿ ನಿಷೇಧಿಸಲಾಗಿರುವ ಕ್ರಮದ ಬಗ್ಗೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿರುವುದನ್ನು ಟೀಕಿಸಿರುವ ಆರ್ ಎಸ್ಎಸ್ ಸಾಪ್ತಾಹಿಕ ಪತ್ರಿಕೆ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಭಯೋತ್ಪಾದಕರನ್ನು ಮಾನವಹಕ್ಕುಗಳ ಹೆಸರಿನಲ್ಲಿ ರಕ್ಷಿಸುವ ಯತ್ನಗಳ ನಂತರ, ಪರಿಸರದ ಹೆಸರಿನಲ್ಲಿ ಭಾರತದ ಅಭಿವೃದ್ಧಿಗೆ ಅಡೆತಡೆಗಳನ್ನೊಡ್ಡಲು ಯತ್ನಿಸಿದ ನಂತರ ಈಗ  ದೇಶವಿರೋಧಿ ಶಕ್ತಿಗಳಿಗೆ ದೇಶದ ವಿರುದ್ಧ, ಭಾರತದಲ್ಲೇ ಪ್ರಚಾರ ಮಾಡಲು ಅವಕಾಶ ನೀಡಲು ಯತ್ನಿಸಲಾಗುತ್ತಿದೆ ಎಂದು ಸಂಪಾದಕೀಯದಲ್ಲಿ ಪಾಂಚಜನ್ಯ ತೀವ್ರ ಅಸಾಮಾಧಾನ ಹೊರಹಾಕಿದೆ. 

ಬಿಬಿಸಿ ಡಾಕ್ಯುಮೆಂಟರಿ ವಿಚಾರವಾಗಿ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ನೊಟೀಸ್ ನ್ನು ಉಲ್ಲೇಖಿಸಿರುವ ಪಾಂಚಜನ್ಯದ ಸಂಪಾದಕೀಯ ಲೇಖನ, ಸುಪ್ರೀಂ ಕೋರ್ಟ್ ನ್ನು ದೇಶದ ಹಿತಾಸಕ್ತಿಯ ರಕ್ಷಣೆಗಾಗಿ ಸೃಷ್ಟಿಸಲಾಗಿದೆ. ಆದರೆ ಅದನ್ನು ಭಾರತ ವಿರೋಧಿಗಳು ತಮ್ಮ ದಾರಿ ಸುಗಮಗೊಳಿಸಿಕೊಳ್ಳುವುದಕ್ಕೆ ಸಾಧನವಾಗಿ ಬಳಕೆ ಮಾಡಿಕೊಳ್ಳುತ್ತಿವೆ. ಸುಪ್ರೀಂ ಕೋರ್ಟ್ ನಡೆಯುತ್ತಿರುವುದು ತೆರಿಗೆದಾರರ ಹಣದಲ್ಲಿ ಹಾಗೂ ದೇಶಕ್ಕಾಗಿ ಭಾರತೀಯ ಕಾನೂನಿನ ಪ್ರಕಾರ ನಡೆಯುತ್ತಿದೆ ಎಂದು ಲೇಖನದಲ್ಲಿ ಹೇಳಲಾಗಿದೆ. 

ಬಿಬಿಸಿ ಡಾಕ್ಯುಮೆಂಟರಿಯನ್ನು ಭಾರತದ ಮಾನಹಾನಿ ಮಾಡುವ ಡಾಕ್ಯುಮೆಂಟರಿ ಎಂದು ಹೇಳಿರುವ ಸಂಪಾದಕೀಯ ಅದರಲ್ಲಿನ ಅಂಶಗಳು ಸುಳ್ಳು ಹಾಗೂ ಕಾಲ್ಪನಿಕ ಕಥೆ ಎಂದಿದೆ. ನಮ್ಮ ಪ್ರಜಾಪ್ರಭುತ್ವದ ನಿಬಂಧನೆಗಳನ್ನು, ಉದಾರತೆ, ನಮ್ಮ ನಾಗರಿಕತೆಯ ಮಾನದಂಡಗಳನ್ನು ದೇಶವಿರೋಧಿ ಶಕ್ತಿಗಳು ನಮ್ಮ ವಿರುದ್ಧವೇ ದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ಸಂಪಾದಕೀಯ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT