ಇಬ್ಬರು ವ್ಯಕ್ತಿಗಳು ಸಜೀವ ದಹನಗೊಂಡ ಕಾರು 
ದೇಶ

ಕಾರಿನಲ್ಲಿ ಇಬ್ಬರು ಸಜೀವ ದಹನ: ಕೃತ್ಯದ ಹಿಂದೆ ಭಜರಂಗದಳದ ಕೈವಾಡ, ಆರೋಪ ನಿರಾಕರಿಸಿದ ಆರೋಪಿಗಳು

ರಾಜಸ್ಥಾನದ ಭಾರತ್ ಪುರ ಜಿಲ್ಲೆಯಿಂದ ಅಪಹರಿಸಲಾದ ಇಬ್ಬರು ವ್ಯಕ್ತಿಗಳು ಹರಿಯಾಣದ ಬಿವಾನಿ ಜಿಲ್ಲೆಯಲ್ಲಿ ಕಾರೊಂದರಲ್ಲಿ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬಿವಾನಿ: ರಾಜಸ್ಥಾನದ ಭಾರತ್ ಪುರ ಜಿಲ್ಲೆಯಿಂದ ಅಪಹರಿಸಲಾದ ಇಬ್ಬರು ವ್ಯಕ್ತಿಗಳು ಹರಿಯಾಣದ ಬಿವಾನಿ ಜಿಲ್ಲೆಯಲ್ಲಿ ಕಾರೊಂದರಲ್ಲಿ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಭಜರಂಗದಳ ಕಾರ್ಯಕರ್ತರು ಮೃತರನ್ನು ಅಪಹರಿಸಿದ್ದಾಗಿ ಅವರ ಕುಟುಂಬಸ್ಥರು ಹೇಳಿದ್ದಾರೆ. ಆದರೆ,  ಗೋ ಹತ್ಯೆಗಾಗಿ ಈ ಘಟನೆ ನಡೆದಿರಬಹುದೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಮೃತರನ್ನು ನಾಸಿರ್ (22) ಮತ್ತು ಜುನೈದ್ ಅಲಿಯಾಸ್ ಜುನಾ (35) ಎಂದು ಗುರುತಿಸಲಾಗಿದೆ. ರಾಜಸ್ಥಾನ ಮೂಲದ ಇವರನ್ನು ಬುಧವಾರ ಅಪಹರಿಸಲಾಗಿತ್ತು. ಕಾರಿನಲ್ಲಿ ಸುಟ್ಟು ಕರಕಲಾದ ಮೃತದೇಹಗಳು ಗುರುವಾರ ಬೆಳಗ್ಗೆ ಬಿವಾನಿಯ ಲೊಹಾರು ಬಳಿ ಪತ್ತೆಯಾಗಿದ್ದವು.

ಮೃತರ ಸಂಬಂಧಿಕರು ನೀಡಿರುವ ದೂರಿನ ಆಧಾರದ ಮೇಲೆ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗೆ ತಂಡವೊಂದನ್ನು ರಚಿಸಲಾಗಿದೆ ಎಂದು ಭರತ್ ಪುರ ಎಸ್ ಪಿ ಶ್ಯಾಮ್ ಸಿಂಗ್ ಹೇಳಿದ್ದಾರೆ. ಈ ಮಧ್ಯೆ ಹೀನಕೃತ್ಯ ಹಿಂದೆ ಭಜರಂಗದಳ ಕೈವಾಡವಿದೆ ಎಂಬುದನ್ನು ಆರೋಪಿಗಳು ಅಲ್ಲಗಳೆದಿದ್ದಾರೆ.

ನಮ್ಮ ತಂಡ ಈ ಕೃತ್ಯವೆಸಗಿಲ್ಲ. ಪೊಲೀಸರು ತನಿಖೆ ನಡೆಸಿ, ನಿಜವಾದ ಆರೋಪಿಗಳನ್ನು ಪತ್ತೆ ಮಾಡಲಿ, ನಮ್ಮ ಸಂಘಟನೆಯ ವರ್ಚಸ್ಸು ಕುಂದಿಸಲು  ಈ ರೀತಿ ಎಳೆದು ತರಲಾಗಿದೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು ಎಂದು ಆರೋಪಿಗಳಲ್ಲಿ ಒಬ್ಬನಾದ ಮೊನು ಮಾನೆಸರ್ ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT