ಕೇದಾರನಾಥ ದೇವಾಲಯ 
ದೇಶ

ಏಪ್ರಿಲ್ 25 ರಂದು ಕೇದಾರನಾಥ ದೇವಾಲಯದ ಬಾಗಿಲು ತೆರೆಯಲಿದೆ

ಚಳಿಗಾಲದ ಅವಧಿಯಲ್ಲಿ ಬಂದ್ ಆಗಿದ್ದ, ಚಾರ್ ಧಾಮ್ ಗಳಲ್ಲಿ ಒಂದಾದ ಕೇದಾರನಾಥ ದೇವಾಲಯದ ಬಾಗಿಲು ಸುಮಾರು ಆರು ತಿಂಗಳ ನಂತರ ಏಪ್ರಿಲ್ 25 ರಂದು ತೆರೆಯಲಿದೆ.

ಡೆಹ್ರಾಡೂನ್: ಚಳಿಗಾಲದ ಅವಧಿಯಲ್ಲಿ ಬಂದ್ ಆಗಿದ್ದ, ಚಾರ್ ಧಾಮ್ ಗಳಲ್ಲಿ ಒಂದಾದ ಕೇದಾರನಾಥ ದೇವಾಲಯದ ಬಾಗಿಲು ಸುಮಾರು ಆರು ತಿಂಗಳ ನಂತರ ಏಪ್ರಿಲ್ 25 ರಂದು ತೆರೆಯಲಿದೆ.

ಏಪ್ರಿಲ್ 25 ರಂದು ಬೆಳಗ್ಗೆ 6.20 ಕ್ಕೆ ಹಿಮಾಲಯ ದೇವಾಲಯದ ದ್ವಾರಗಳನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗುವುದು ಎಂದು ಬದರಿನಾಥ್-ಕೇದಾರನಾಥ ಮಂದಿರ ಸಮಿತಿ(ಬಿಕೆಟಿಸಿ) ಮೂಲಗಳು ತಿಳಿಸಿವೆ.

ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ ಶನಿವಾರ ಉಖಿಮಠದ ಓಂಕಾರೇಶ್ವರ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ದೇವಾಲಯದ ಬಾಗಿಲು ತೆರೆಯುವ ಸಮಯ ಮತ್ತು ದಿನಾಂಕವನ್ನು ಪ್ರಕಟಿಸಲಾಯಿತು.

ಸಮಾರಂಭದಲ್ಲಿ ಬಿಕೆಟಿಸಿ ಅಧಿಕಾರಿಗಳು, ತೀರ್ಥಪುರೋಹಿತರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಕೇದಾರನಾಥವನ್ನು ಬಂದ್ ಮಾಡಿದ ನಂತರ ಚಳಿಗಾಲದಲ್ಲಿ ಪೂಜಿಸುವ ಉಖಿಮಠದ ಓಂಕಾರೇಶ್ವರ ದೇವಸ್ಥಾನಕ್ಕೆ ಪ್ರತಿ ವರ್ಷ ಶಿವನ ವಿಗ್ರಹವನ್ನು ಕೆಳಗೆ ತರಲಾಗುತ್ತದೆ.

ಬದರಿನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ಈಗಾಗಲೇ ಏಪ್ರಿಲ್ 27 ಮತ್ತು ಏಪ್ರಿಲ್ 22 ರಂದು ತೆರೆಯಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT