ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 
ದೇಶ

ನವದೆಹಲಿ: ರೂ.16,692 ಕೋಟಿ ಜಿಎಸ್ ಟಿ ಪರಿಹಾರದ ಬಾಕಿ ಹಣ ಪಾವತಿ- ನಿರ್ಮಲಾ ಸೀತಾರಾಮನ್

ಜೂನ್ ತಿಂಗಳ 16,982 ಕೋಟಿ ರೂ. ಸೇರಿದಂತೆ ಎಲ್ಲಾ ಜಿಎಸ್‌ಟಿ ಪರಿಹಾರ ಬಾಕಿ ಮೊತ್ತವನ್ನು ಪಾವತಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ. 

ನವದೆಹಲಿ: ಜೂನ್ ತಿಂಗಳ 16,982 ಕೋಟಿ ರೂ. ಸೇರಿದಂತೆ ಎಲ್ಲಾ ಜಿಎಸ್‌ಟಿ ಪರಿಹಾರ ಬಾಕಿ ಮೊತ್ತವನ್ನು ಪಾವತಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ. 

ಜಿಎಸ್‌ಟಿ ಸಮಿತಿಯ 49 ನೇ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವರು, ಪಾನ್ ಮಸಾಲಾ ಮತ್ತು ಗುಟ್ಕಾ ಉದ್ಯಮದಿಂದ ತೆರಿಗೆ ವಂಚನೆ ಪರಿಶೀಲನೆ ಮತ್ತು ಸರಕು ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಕುರಿತು  ಸಚಿವರ ಗುಂಪಿನ ವರದಿ ಕುರಿತು ಸಮಿತಿಯಲ್ಲಿ ಚರ್ಚಿಸಲಾಗಿದೆ ಎಂದರು. 

ದ್ರವ ಬೆಲ್ಲ, ಪೆನ್ಸಿಲ್ ಶಾರ್ಪನರ್ ಮತ್ತು ಕೆಲವು ಟ್ರ್ಯಾಕಿಂಗ್ ಸಾಧನಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು ಜಿಎಸ್ ಟಿ ಸಮಿತಿ ಕಡಿಮೆ ಮಾಡಿದ್ದು,  ನಿಗದಿತ ದಿನಾಂಕದ ನಂತರ ವಾರ್ಷಿಕ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವ ವಿಳಂಬ ಶುಲ್ಕವನ್ನು ತರ್ಕಬದ್ಧಗೊಳಿಸಲು ನಿರ್ಧರಿಸಿದೆ ಎಂದು ಹಣಕಾಸು ಸಚಿವರು ಹೇಳಿದರು.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಮತ್ತು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT