ಸಿಬಿಐ (ಸಂಗ್ರಹ ಚಿತ್ರ) 
ದೇಶ

ಮನೀಶ್ ಸಿಸೋಡಿಯಾ ಮನವಿ ಸ್ವೀಕಾರ; ಹೊಸದಾಗಿ ಸಮನ್ಸ್ ಕಳುಹಿಸಲಿರುವ ಕೇಂದ್ರೀಯ ತನಿಖಾ ದಳ

ದೆಹಲಿ ಅಬಕಾರಿ ನೀತಿ ಹಗರಣದ ಇತ್ತೀಚಿನ ಬೆಳವಣಿಗೆಯಲ್ಲಿ, ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯ ಕೋರಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಮನವಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸ್ವೀಕರಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಇತ್ತೀಚಿನ ಬೆಳವಣಿಗೆಯಲ್ಲಿ, ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯ ಕೋರಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಮನವಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸ್ವೀಕರಿಸಿದೆ.

ಇದಕ್ಕೂ ಮುನ್ನ ಸಿಸೋಡಿಯಾ ಸಿಬಿಐಗೆ ಪತ್ರ ಬರೆದು ಏಳು ದಿನಗಳ ಕಾಲಾವಕಾಶ ಕೋರಿದ್ದರು.

ಸಿಬಿಐ ಇದೀಗ ಸಿಸೋಡಿಯಾ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಲಿದ್ದು, ತನಿಖೆಗೆ ಹಾಜರಾಗಲು ಹೊಸ ದಿನಾಂಕವನ್ನು ನಿಗದಿಪಡಿಸಲಿದೆ.

ತೆರೆಮರೆಯಲ್ಲಿ ಇರುವುದು ಬಿಜೆಪಿಯೇ ಎಂದು ಸಿಸೋಡಿಯಾ ಆರೋಪಿಸಿದ್ದಾರೆ. ತನಿಖೆಗೆ ಹಾಜರಾಗಲು ಸಮನ್ಸ್ ನೀಡಿದಾಗ ದೆಹಲಿ ಬಜೆಟ್‌ಗೆ ಅಂತಿಮ ಸ್ಪರ್ಶ ನೀಡುವ ಕಾರ್ಯದಲ್ಲಿ ತಾನು ನಿರತನಾಗಿದ್ದಾಗಿ ಅವರು ಆರೋಪಿಸಿದ್ದಾರೆ.

'ನಾನೂ ಹಣಕಾಸು ಸಚಿವ ಕೂಡ. ಹೀಗಾಗಿ, ನಾನು ದೆಹಲಿ ಬಜೆಟ್ ಅನ್ನು ಸಿದ್ಧಪಡಿಸಬೇಕು. ಅನುಮೋದನೆಗಾಗಿ ಕೇಂದ್ರಕ್ಕೆ ಕಳುಹಿಸಲಾಗುವುದು. ಅಭಿವೃದ್ಧಿ ಕೆಲಸಗಳನ್ನು ಮಾಡುವುದರಿಂದ ನಮ್ಮನನು ತಡೆಯಲು ಬಿಜೆಪಿಯವರು ಸಿಬಿಐ ಅನ್ನು ಬಳಸುತ್ತಿದ್ದಾರೆ. ನಾನು ಸಮಯ ಕೇಳಿದ್ದೇನೆ' ಎಂದು ಸಿಸೋಡಿಯಾ ಹೇಳಿದರು.

ಇದೀಗ ಸಿಬಿಐ ಅವರ ಮನವಿಯನ್ನು ಸ್ವೀಕರಿಸಿರುವುದರಿಂದ ಅವರಿಗೆ ಹೊಸದಾಗಿ ಸಮನ್ಸ್ ನೀಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT