ಸಿಬಿಐ (ಸಂಗ್ರಹ ಚಿತ್ರ) 
ದೇಶ

ಮನೀಶ್ ಸಿಸೋಡಿಯಾ ಮನವಿ ಸ್ವೀಕಾರ; ಹೊಸದಾಗಿ ಸಮನ್ಸ್ ಕಳುಹಿಸಲಿರುವ ಕೇಂದ್ರೀಯ ತನಿಖಾ ದಳ

ದೆಹಲಿ ಅಬಕಾರಿ ನೀತಿ ಹಗರಣದ ಇತ್ತೀಚಿನ ಬೆಳವಣಿಗೆಯಲ್ಲಿ, ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯ ಕೋರಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಮನವಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸ್ವೀಕರಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಇತ್ತೀಚಿನ ಬೆಳವಣಿಗೆಯಲ್ಲಿ, ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯ ಕೋರಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಮನವಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸ್ವೀಕರಿಸಿದೆ.

ಇದಕ್ಕೂ ಮುನ್ನ ಸಿಸೋಡಿಯಾ ಸಿಬಿಐಗೆ ಪತ್ರ ಬರೆದು ಏಳು ದಿನಗಳ ಕಾಲಾವಕಾಶ ಕೋರಿದ್ದರು.

ಸಿಬಿಐ ಇದೀಗ ಸಿಸೋಡಿಯಾ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಲಿದ್ದು, ತನಿಖೆಗೆ ಹಾಜರಾಗಲು ಹೊಸ ದಿನಾಂಕವನ್ನು ನಿಗದಿಪಡಿಸಲಿದೆ.

ತೆರೆಮರೆಯಲ್ಲಿ ಇರುವುದು ಬಿಜೆಪಿಯೇ ಎಂದು ಸಿಸೋಡಿಯಾ ಆರೋಪಿಸಿದ್ದಾರೆ. ತನಿಖೆಗೆ ಹಾಜರಾಗಲು ಸಮನ್ಸ್ ನೀಡಿದಾಗ ದೆಹಲಿ ಬಜೆಟ್‌ಗೆ ಅಂತಿಮ ಸ್ಪರ್ಶ ನೀಡುವ ಕಾರ್ಯದಲ್ಲಿ ತಾನು ನಿರತನಾಗಿದ್ದಾಗಿ ಅವರು ಆರೋಪಿಸಿದ್ದಾರೆ.

'ನಾನೂ ಹಣಕಾಸು ಸಚಿವ ಕೂಡ. ಹೀಗಾಗಿ, ನಾನು ದೆಹಲಿ ಬಜೆಟ್ ಅನ್ನು ಸಿದ್ಧಪಡಿಸಬೇಕು. ಅನುಮೋದನೆಗಾಗಿ ಕೇಂದ್ರಕ್ಕೆ ಕಳುಹಿಸಲಾಗುವುದು. ಅಭಿವೃದ್ಧಿ ಕೆಲಸಗಳನ್ನು ಮಾಡುವುದರಿಂದ ನಮ್ಮನನು ತಡೆಯಲು ಬಿಜೆಪಿಯವರು ಸಿಬಿಐ ಅನ್ನು ಬಳಸುತ್ತಿದ್ದಾರೆ. ನಾನು ಸಮಯ ಕೇಳಿದ್ದೇನೆ' ಎಂದು ಸಿಸೋಡಿಯಾ ಹೇಳಿದರು.

ಇದೀಗ ಸಿಬಿಐ ಅವರ ಮನವಿಯನ್ನು ಸ್ವೀಕರಿಸಿರುವುದರಿಂದ ಅವರಿಗೆ ಹೊಸದಾಗಿ ಸಮನ್ಸ್ ನೀಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ