ಎನ್ ಡಿಆರ್ ಎಫ್ 
ದೇಶ

ಟರ್ಕಿಯಿಂದ ಭಾರತಕ್ಕೆ ಮರಳಿದ ಎನ್ ಡಿಆರ್ ಎಫ್ ಕೊನೆಯ ತಂಡ

ಸರಣಿ ಭೂಕಂಪದಿಂದ ತತ್ತರಿಸಿದ್ದ ಟರ್ಕಿಗೆ ನೆರವು ನೀಡಲು ತೆರಳಿದ್ದ ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF)ಯ ಕೊನೆ ತಂಡ ಭಾನುವಾರ ಮನೆಗೆ ಮರಳಿದೆ.

ನವದೆಹಲಿ: ಸರಣಿ ಭೂಕಂಪದಿಂದ ತತ್ತರಿಸಿದ್ದ ಟರ್ಕಿಗೆ ನೆರವು ನೀಡಲು ತೆರಳಿದ್ದ ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF)ಯ ಕೊನೆ ತಂಡ ಭಾನುವಾರ ಮನೆಗೆ ಮರಳಿದೆ.

ಟರ್ಕಿ ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರೆಸಿಡೆನ್ಸಿ(AFAD) ರಕ್ಷಣಾ ಕಾರ್ಯಾಚರಣೆ ಅಂತ್ಯಗೊಳಿಸುವುದಾಗಿ ಘೋಷಿಸಿದ ನಂತರ ಆಪರೇಷನ್ ದೋಸ್ತ್ ಅಡಿಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ತೆರಳಿದ್ದ ಎನ್ ಡಿಆರ್ ಆಫ್ ತಂಡ ಇಂದು ಭಾರತಕ್ಕೆ ಮರಳಿದೆ.

ಆಪರೇಷನ್ ದೋಸ್ತ್ ಅಡಿಯಲ್ಲಿ 151 ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಶ್ವಾನ ದಳ ಒಳಗೊಂಡ ಮೂರು ತಂಡಗಳು ಭೂಕಂಪ ಪೀಡಿತ ಟರ್ಕಿಗೆ ತೆರಳಿದ್ದವು.

ಎನ್ ಡಿಆರ್ ಎಫ್ ತಂಡಗಳು ಟರ್ಕಿಯ ನೂರ್ಡಗಿ ಮತ್ತು ಅಂತಕ್ಯದಲ್ಲಿ 35 ಜನರನ್ನು ರಕ್ಷಿಸಿದ್ದು, ಶೋಧ, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ, ಟರ್ಕಿ ಮತ್ತು ಸಿರಿಯಾದಲ್ಲಿ ಭೀಕರ ಭೂಕಂಪ ಸಂಭವಿಸಿದ ಸುಮಾರು ಎರಡು ವಾರಗಳ ನಂತರ ಹೆಚ್ಚಿನ ಪ್ರಾಂತ್ಯಗಳಲ್ಲಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆ ಅಂತ್ಯಗೊಂಡಿವೆ ಎಂದು ಟರ್ಕಿಶ್ ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರೆಸಿಡೆನ್ಸಿ (ಎಎಫ್‌ಎಡಿ) ಶನಿವಾರ ಹೇಳಿರುವುದಾಗಿ ಅಲ್ ಜಜೀರಾ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT