ಶರದ್ ಪವಾರ್ 
ದೇಶ

ಶಿವಸೇನೆ ಚಿಹ್ನೆ ವಿವಾದದಲ್ಲಿ ಭಾಗಿಯಾಗುವುದಿಲ್ಲ: ಶರದ್ ಪವಾರ್

ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ನೀಡಿದ ಚುನಾವಣಾ ಆಯೋಗದ ನಿರ್ಧಾರದ ಬಗ್ಗೆ ನನ್ನ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ ಮತ್ತು ಚಿಹ್ನೆ ವಿವಾದಲ್ಲಿ ನಾನು ಭಾಗಿಯಾಗುವುದಿಲ್ಲ...

ಮುಂಬೈ: ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ನೀಡಿದ ಚುನಾವಣಾ ಆಯೋಗದ ನಿರ್ಧಾರದ ಬಗ್ಗೆ ನನ್ನ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ ಮತ್ತು ಚಿಹ್ನೆ ವಿವಾದಲ್ಲಿ ನಾನು ಭಾಗಿಯಾಗುವುದಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಭಾನುವಾರ ಹೇಳಿದ್ದಾರೆ.

ಚುನಾವಣಾ ಆಯೋಗ ಕಳೆದ ಶುಕ್ರವಾರ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ನೀಡುವ ಮೂಲಕ ಉದ್ಧವ್ ಠಾಕ್ರೆ ಬಣಕ್ಕೆ ಶಾಕ್ ನೀಡಿದೆ.

ಚುನಾವಣಾ ಆಯೋಗದ ಆದೇಶ 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ' ಎಂದು ಉದ್ಧವ್ ಠಾಕ್ರೆ ಹೇಳಿದ್ದು, ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಹೇಳಿದ್ದಾರೆ.

ಇನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಚುನಾವಣಾ ಆಯೋಗದ ನಿರ್ಧಾರ ಸತ್ಯ ಮತ್ತು ಜನರ ಗೆಲುವು ಎಂದು ಬಣ್ಣಿಸಿದ್ದರು.

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣಕ್ಕೆ 'ಬಿಲ್ಲು ಮತ್ತು ಬಾಣ' ಚಿಹ್ನೆ ಸಿಗದಿರುವುದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ. ಏಕೆಂದರೆ ಅವರು ಹೊಸ ಚುನಾವಣಾ ಚಿಹ್ನೆಯನ್ನು ಸ್ವೀಕರಿಸುತ್ತಾರೆ ಎಂದು ಪವಾರ್ ಹೇಳಿದ್ದಾರೆ.

ಇಂದು ಪುಣೆಯ ಬಾರಾಮತಿ ಪಟ್ಟಣದಲ್ಲಿ ಶಿವಸೇನೆ ಚಿಹ್ನೆ ವಿವಾದದ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಪವಾರ್ ಅವರು, ಏಕನಾಥ್ ಶಿಂಧೆ ಅವರಿಗೆ ನೀಡಿರುವ ಹೆಸರು ಮತ್ತು ಚಿಹ್ನೆಯ ಕುರಿತ ವಿವಾದದಲ್ಲಿ ಭಾಗಿಯಾಗಲು ನಾನು ಬಯಸುವುದಿಲ್ಲ. ನಾನು ಈಗಾಗಲೇ ನನ್ನ ನಿಲುವು ಸ್ಪಷ್ಟಪಡಿಸಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್