ಸಾಂದರ್ಭಿಕ ಚಿತ್ರ 
ದೇಶ

ಅಸ್ಸಾಂ: ಪತಿ ಮತ್ತು ಅತ್ತೆಯನ್ನು ಕೊಂದು ದೇಹದ ಭಾಗಗಳನ್ನು ಫ್ರೀಜರ್‌ನಲ್ಲಿ ಶೇಖರಿಸಿಟ್ಟಿದ್ದ ಮಹಿಳೆ

ಮಹಿಳೆಯೊಬ್ಬರು ತನ್ನ ಪತಿ ಮತ್ತು ಅತ್ತೆಯನ್ನು ಕೊಂದು, ಅವರ ದೇಹದ ಭಾಗಗಳನ್ನು ಕೆಲವು ದಿನಗಳವರೆಗೆ ಫ್ರೀಜರ್‌ನಲ್ಲಿ ಸಂಗ್ರಹಿಸಿ ನಂತರ ನದಿಯಲ್ಲಿ ಎಸೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಹಾವಟಿ: ಮಹಿಳೆಯೊಬ್ಬರು ತನ್ನ ಪತಿ ಮತ್ತು ಅತ್ತೆಯನ್ನು ಕೊಂದು, ಅವರ ದೇಹದ ಭಾಗಗಳನ್ನು ಕೆಲವು ದಿನಗಳವರೆಗೆ ಫ್ರೀಜರ್‌ನಲ್ಲಿ ಸಂಗ್ರಹಿಸಿ ನಂತರ ನದಿಯಲ್ಲಿ ಎಸೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏಳು ತಿಂಗಳ ಹಿಂದೆ ನಗರದ ನೂನ್ಮತಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿ ತಪ್ಪೊಪ್ಪಿಕೊಂಡ ನಂತರ ಸೋಮವಾರವಷ್ಟೇ ಈ ಘಟನೆ ಬೆಳಕಿಗೆ ಬಂದಿದೆ.

ಹಿರಿಯ ಪೊಲೀಸ್ ಅಧಿಕಾರಿ ಪ್ರಕಾರ, ಆರೋಪಿ ಬಂದನಾ ಕಲಿತಾ, ತನ್ನ ಇಬ್ಬರು ಸ್ನೇಹಿತರ ಸಹಾಯದಿಂದ ಪತಿ ಅಮರಜ್ಯೋತಿ ಡೇ ಮತ್ತು ಅತ್ತೆ ಶಂಕರಿ ಡೇ ಅವರನ್ನು 2022ರ ಆಗಸ್ಟ್ 17 ರಂದು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

'ಕೊಲೆ ನಂತರ, ಬಂದನಾ ಅವರು ಸಂತ್ರಸ್ತರ ದೇಹದ ಭಾಗಗಳನ್ನು ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸಿ ಮನೆಯಿಂದ ಹೊರಟುಹೋಗಿದ್ದಾರೆ. ಅದಾದ ನಾಲ್ಕು ದಿನಗಳ ನಂತರ ಆಗಸ್ಟ್ 21 ರಂದು ಮನೆಗೆ ಹಿಂದಿರುಗಿದ್ದಾರೆ ಮತ್ತು ಗುವಾಹಟಿಯಿಂದ ಕನಿಷ್ಠ 200 ಕಿಮೀ ದೂರದಲ್ಲಿರುವ ಮೇಘಾಲಯದ ದವ್ಕಿ ನದಿಗೆ ದೇಹದ ತುಂಡುಗಳನ್ನು ಎಸೆದಿದ್ದಾರೆ' ಎಂದು ಅಧಿಕಾರಿ ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಕಲಿತಾ ಅವರ ನೆರೆಹೊರೆಯವರು ಆಕೆಯ ಮನೆಯ ಟೆರೇಸ್‌ನಲ್ಲಿ ಪೀಠೋಪಕರಣಗಳನ್ನು ಸುಡುವುದನ್ನು ನೋಡಿರುವುದಾಗಿ ಖಚಿತಪಡಿಸಿದ್ದಾರೆ.

ಕಲಿತಾ ಅವರ ಇಬ್ಬರು ಸ್ನೇಹಿತರಾದ ಅರುಪ್ ದೇಕಾ ಮತ್ತು ಧಂಜಿತ್ ದೇಕಾ ಅವರನ್ನು ಕೊಲೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಬಂಧಿಸಲಾಗಿದೆ. 

ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಕುರಿತು ಪೊಲೀಸರು ಇನ್ನೂ ಅಧಿಕೃತ ಹೇಳಿಕೆ ನೀಡಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT