ಪ್ರಾತಿನಿಧಿಕ ಚಿತ್ರ 
ದೇಶ

ಶಿಕ್ಷಕರ ನೇಮಕಾತಿ ಹಗರಣ: ಪಶ್ಚಿಮ ಬಂಗಾಳದಲ್ಲಿ ಈವರೆಗೆ ವಶಪಡಿಸಿಕೊಂಡದ್ದರ ಒಟ್ಟು ಮೌಲ್ಯ 111 ಕೋಟಿ ರೂ.

ಪಶ್ಚಿಮ ಬಂಗಾಳದಲ್ಲಿ ನಡೆದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಈವರೆಗೆ ವಶಪಡಿಸಿಕೊಂಡ ನಗದು ಮತ್ತು ಚಿನ್ನ ಹಾಗೂ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿರುವ ಒಟ್ಟು ಮೊತ್ತ ಸುಮಾರು 111 ಕೋಟಿ ರೂ. ಆಗಿದೆ ಎಂದು ಹೇಳಲಾಗಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಈವರೆಗೆ ವಶಪಡಿಸಿಕೊಂಡ ನಗದು ಮತ್ತು ಚಿನ್ನ ಹಾಗೂ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿರುವ ಒಟ್ಟು ಮೊತ್ತ ಸುಮಾರು 111 ಕೋಟಿ ರೂ. ಆಗಿದೆ ಎಂದು ಹೇಳಲಾಗಿದೆ.

ಈ ಪ್ರಕರಣದಲ್ಲಿ ಸಮಾನಾಂತರ ತನಿಖೆ ನಡೆಸುತ್ತಿರುವ ಕೇಂದ್ರೀಯ ಸಂಸ್ಥೆಗಳಾದ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಗಳು ವಶಪಡಿಸಿಕೊಂಡ ಮತ್ತು ಫ್ರೀಜ್ ಮಾಡಿದ ಖಾತೆಗಳು ಸಂಯೋಜಿತ ಅಂಕಿ ಅಂಶವಾಗಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ನಗದು ಮತ್ತು ಚಿನ್ನವನ್ನು ವಶಪಡಿಸಿಕೊಳ್ಳುವ ವಿಷಯದಲ್ಲಿ, ಇಡಿ ತನ್ನ ಸಹವರ್ತಿ ಕೇಂದ್ರೀಯ ತನಿಖಾ ಸಂಸ್ಥೆಗಿಂತ ಬಹಳ ಮುಂದಿದೆ.

ಕಳೆದ ವರ್ಷ ಜುಲೈನಲ್ಲಿ ಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವೆ ಮತ್ತು ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಎರಡು ನಿವಾಸಗಳಿಂದ ಇ.ಡಿ ಗರಿಷ್ಠ ಮೌಲ್ಯದ ನಗದು ಮತ್ತು ಚಿನ್ನವನ್ನು ಜಪ್ತಿ ಮಾಡಿತ್ತು. ಸದ್ಯ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈಮಧ್ಯೆ, ಸಿಬಿಐ ಮತ್ತು ಇ.ಡಿ ಸದ್ಯ ಹಗರಣದ ಪ್ರಮುಖ ಏಜೆಂಟ್ ನೆಟ್‌ವರ್ಕ್ ಮೇಲೆ ಕೇಂದ್ರೀಕರಿಸಿದೆ. ಅವರಲ್ಲಿ ಕೆಲವರು ಕುಂತಲ್ ಘೋಷ್, ಪ್ರಸನ್ನ ರಾಯ್ ಮತ್ತು ಚಂದನ್ ಮೊಂಡಲ್ ಈಗಾಗಲೇ ನ್ಯಾಯಾಂಗ ಅಥವಾ ಕೇಂದ್ರೀಯ ಏಜೆನ್ಸಿ ಕಸ್ಟಡಿಯಲ್ಲಿದ್ದಾರೆ.

ಈ ಏಜೆಂಟರು ಹಗರಣದ ಪ್ರಮುಖ ಮಿದುಳುಗಳು ಮತ್ತು ಸರ್ಕಾರಿ ಶಾಲೆಯಲ್ಲಿ ಬೋಧಕ ಮತ್ತು ಬೋಧಕೇತರ ಉದ್ಯೋಗಗಳನ್ನು ಪಡೆಯಲು ಭಾರಿ ಮೊತ್ತದ ಹಣವನ್ನು ನೀಡಿದ ಸಾವಿರಾರು ಅಭ್ಯರ್ಥಿಗಳ ನಡುವಿನ ಕೊಂಡಿಯಾಗಿದ್ದರು. ಈ ಮುಖ್ಯ ಏಜೆಂಟ್‌ಗಳು ಮತ್ತೆ ತಮ್ಮದೇ ಆದ ಉಪ-ಏಜೆಂಟರ ಜಾಲಗಳ ಮೂಲಕ ಕಾರ್ಯನಿರ್ವಹಿಸಿದ್ದರು.

ಉಪ ಏಜೆಂಟರು ಉದ್ಯೋಗಕ್ಕಾಗಿ ಹಣ ಪಾವತಿಸಲು ಸಿದ್ಧವಿರುವ ಅಭ್ಯರ್ಥಿಗಳನ್ನು ಗುರುತಿಸುವುದು, ಅವರನ್ನು ಸಂಪರ್ಕಿಸುವುದು ಮತ್ತು ಅದರಂತೆ ಮುಂದುವರಿಯುವುದನ್ನು ಮಾಡುತ್ತಿದ್ದರು. ಮುಖ್ಯವಾಗಿ ನಾಯಿಕೊಡೆಗಳಂತೆ ಬೆಳೆಯುತ್ತಿರುವ ಖಾಸಗಿ ಬ್ಯಾಚುಲರ್ ಆಫ್ ಎಜುಕೇಶನ್ ಮತ್ತು ಡಿಪ್ಲೊಮಾ ಇನ್ ಎಲಿಮೆಂಟರಿ ಶಿಕ್ಷಣ ಸಂಸ್ಥೆಗಳು ಅವರ ಗುರಿಯಾಗಿತ್ತು ಎಂದು ಸಿಬಿಐ ಮೂಲಗಳು ತಿಳಿಸಿವೆ.

ಭಾನುವಾರ ಮಧ್ಯಾಹ್ನ ಸಿಬಿಐನಿಂದ ಬಂಧನಕ್ಕೊಳಗಾಗಿದ್ದ ತಪಸ್ ಮೊಂಡಲ್, ಇಂತಹ ಖಾಸಗಿ ಸಂಸ್ಥೆಗಳ ಛತ್ರಿ ಸಂಘಟನೆಯಾದ ಆಲ್ ಬೆಂಗಾಲ್ ಶಿಕ್ಷಕರ ತರಬೇತಿ ಸಾಧಕರ ಸಂಘದ ಅಧ್ಯಕ್ಷರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

SCROLL FOR NEXT