ಸಾಂದರ್ಭಿಕ ಚಿತ್ರ 
ದೇಶ

ಎಫ್‌ಸಿಐ ಭ್ರಷ್ಟಾಚಾರ ಪ್ರಕರಣ: ಪಂಜಾಬ್‌ನ 30 ಸ್ಥಳಗಳಲ್ಲಿ ಸಿಬಿಐ ದಾಳಿ

ವ್ಯಾಪಾರಿಗಳು ಮತ್ತು ಅಕ್ಕಿ ಮಿಲ್ಲುಗಳಿಗೆ ಅನುಕೂಲವಾಗುವಂತೆ ಕಳಪೆ ಧಾನ್ಯಗಳನ್ನು ಖರೀದಿಸಿದ ಭಾರತೀಯ ಆಹಾರ ನಿಗಮದ(ಎಫ್‌ಸಿಐ) ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ಮಂಗಳವಾರ...

ನವದೆಹಲಿ: ವ್ಯಾಪಾರಿಗಳು ಮತ್ತು ಅಕ್ಕಿ ಮಿಲ್ಲುಗಳಿಗೆ ಅನುಕೂಲವಾಗುವಂತೆ ಕಳಪೆ ಧಾನ್ಯಗಳನ್ನು ಖರೀದಿಸಿದ ಭಾರತೀಯ ಆಹಾರ ನಿಗಮದ(ಎಫ್‌ಸಿಐ) ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ಮಂಗಳವಾರ ಪಂಜಾಬ್‌ನ 30 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಆಪರೇಷನ್ ಕನಕ್ 2' ಭಾಗವಾಗಿ, ಸಿರ್ಹಿಂದ್, ಫತೇಪುರ್ ಸಾಹಿಬ್ ಮತ್ತು ಮೊಂಗಾ ಸೇರಿದಂತೆ ಪಂಜಾಬ್‌ನ ಅನೇಕ ಜಿಲ್ಲೆಗಳಲ್ಲಿ ಧಾನ್ಯ ವ್ಯಾಪಾರಿಗಳು, ಅಕ್ಕಿ ಮಿಲ್ ಮಾಲೀಕರು ಮತ್ತು ಎಫ್‌ಸಿಐನಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಎಫ್‌ಸಿಐನಲ್ಲಿನ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ ಗಳಿಗೆ ಸಂಬಂಧಿಸಿದಂತೆ ಸಿಬಿಐ ಇಂದು ಎರಡನೇ ಸುತ್ತಿನ ದಾಳಿ ನಡೆಸಿದೆ. ಕಳಪೆ ಧಾನ್ಯಗಳನ್ನು ಖರೀದಿಸಿಲು ಎಫ್‌ಸಿಐ ಅಧಿಕಾರಿಗಳು ಪ್ರತಿ ಟ್ರಕ್‌ಗೆ 1000 ದಿಂದ 4000 ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ತಾಂತ್ರಿಕ ಸಹಾಯಕರಿಂದ ಹಿಡಿದು ಕಾರ್ಯನಿರ್ವಾಹಕ ನಿರ್ದೇಶಕರವರೆಗಿನ ಎಲ್ಲಾ ಅಧಿಕಾರಿಗಳು ಖಾಸಗಿ ಮಿಲ್ಲರ್‌ಗಳಿಂದ ಲಂಚ ಪಡೆದಿದ್ದು, ಪ್ರಧಾನ ಕಛೇರಿಯವರೆಗೂ ಲಂಚ ತಲುಪಿಸಲಾಗಿದೆ ಎಂದು ಆರೋಪಿಸಿಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT