ಸಾಂದರ್ಭಿಕ ಚಿತ್ರ 
ದೇಶ

ಪಾಕಿಸ್ತಾನ: ರಾವಲ್ಪಿಂಡಿಯಲ್ಲಿ ಕಾಶ್ಮೀರದ ಹಿಜ್ಬುಲ್ ಕಮಾಂಡರ್ ಗುಂಡಿಕ್ಕಿ ಹತ್ಯೆ 

ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್‌ನ ಸ್ವಯಂಘೋಷಿತ ಕಮಾಂಡರ್ ಬಶೀರ್ ಅಹ್ಮದ್ ಪೀರ್ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ನವದೆಹಲಿ: ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್‌ನ ಸ್ವಯಂಘೋಷಿತ ಕಮಾಂಡರ್ ಬಶೀರ್ ಅಹ್ಮದ್ ಪೀರ್ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯವರಾದ ಪೀರ್, 15 ವರ್ಷಗಳಿಂದ ಪಾಕಿಸ್ತಾನದಲ್ಲಿ ನೆಲೆಸಿದ್ದರು ಎಂದು ಗುಪ್ತಚರ ಅಧಿಕಾರಿಗಳು ತಿಳಿಸಿದ್ದಾರೆ. ಪೀರ್ ಅಲಿಯಾಸ್ ಇಮ್ತಿಯಾಜ್ ಆಲಂ ಅವರನ್ನು ಸೋಮವಾರ ರಾವಲ್ಪಿಂಡಿಯ ಅಂಗಡಿಯೊಂದರ ಹೊರಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ಪಾಕ್ ಮಾಧ್ಯಮಗಳು ವರದಿ ಮಾಡಿವೆ. 

ಗಡಿ ನಿಯಂತ್ರಣ ರೇಖೆ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಭಯೋತ್ಪಾದಕರನ್ನು ಕಳುಹಿಸುವ  ಉಸ್ತುವಾರಿ ವಹಿಸಿದ್ದ ಪೀರ್, ಭಯೋತ್ಪಾದಕ ಚಟುವಟಿಕೆಗಳಲ್ಲಿ ವಹಿಸಿದ್ದ ಪಾತ್ರಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಕಳೆದ ವರ್ಷ ಅಕ್ಟೋಬರ್ 4 ರಂದು ಆತನನ್ನು ಕೇಂದ್ರ ಸರ್ಕಾರ ಭಯೋತ್ಪಾದಕ ಎಂದು ಹೆಸರಿಸಿತ್ತು. 

ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್-ಎ-ತೈಬಾ ಮತ್ತು ಇತರ ಭಯೋತ್ಪಾದಕ ಸಂಘಟನೆಗಳ ಚಟುವಟಿಕೆಗಳ ವಿಸ್ತರಣೆಗಾಗಿ ಮಾಜಿ ಉಗ್ರಗಾಮಿಗಳು ಮತ್ತು ಇತರ ಕಾರ್ಯಕರ್ತರನ್ನು ಒಗ್ಗೂಡಿಸಲು ಪೀರ್ ಹಲವಾರು ಆನ್‌ಲೈನ್ ಪ್ರಚಾರ ಗುಂಪುಗಳಲ್ಲಿ ಭಾಗವಹಿಸಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT