ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ: ಮೀಸಲು ಅರಣ್ಯದಲ್ಲಿ ಬಿಯರ್ ಬಾಟಲಿಯೊಳಗೆ ಐಇಡಿ, ಪೊಲೀಸರ ವಶಕ್ಕೆ

ತೆಲಂಗಾಣದ ಮುಲುಗು ಜಿಲ್ಲೆಯ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯ ವೇಳೆ ಮೀಸಲು ಅರಣ್ಯ ಪ್ರದೇಶದಲ್ಲಿ ಬಿಯರ್ ಬಾಟಲಿ ಒಳಗೆ ಸುಧಾರಿತ ಸ್ಫೋಟಕ ಹಾಕಿರುವುದನ್ನು ಪತ್ತೆ ಮಾಡಿದ್ದಾರೆ.

ಮುಲುಗು: ತೆಲಂಗಾಣದ ಮುಲುಗು ಜಿಲ್ಲೆಯ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯ ವೇಳೆ ಮೀಸಲು ಅರಣ್ಯ ಪ್ರದೇಶದಲ್ಲಿ ಬಿಯರ್ ಬಾಟಲಿ ಒಳಗೆ ಸುಧಾರಿತ ಸ್ಫೋಟಕ ಹಾಕಿರುವುದನ್ನು ಪತ್ತೆ ಮಾಡಿದ್ದಾರೆ. ವೆಂಕಟಾಪುರಂ ಮಂಡಲದ ಪಾಮುನೂರು ಗ್ರಾಮದ ಬಳಿಯ ಮೀಸಲು ಅರಣ್ಯದಲ್ಲಿ ನಿಷೇಧಿತ ಮಾವೋವಾದಿಗಳು ಅಳವಡಿಸಿದ್ದ ಐಇಡಿ ವಶಪಡಿಸಿಕೊಳ್ಳಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಫೆಬ್ರವರಿ 17 ರಂದು ಗ್ರಾಮಗಳಿಗೆ ಭೇಟಿ ನೀಡುವ ಪೊಲೀಸರನ್ನು ಕೊಲ್ಲುವ ಉದ್ದೇಶದಿಂದ ನಿಷೇಧಿತ ಮಾವೋವಾದಿ ಪಕ್ಷದ ಉನ್ನತ ನಾಯಕರು ಯೋಜನೆ ರೂಪಿಸಿ ಕಾಡಿನಲ್ಲಿ ಐಇಡಿ ಸ್ಫೋಟಕ ಇಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಸಿಕ್ಕಿತು ಎಂದು  ಏತೂರ್ನಗರಂ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸಿರಿಸೆಟ್ಟಿ ಸಂಕೀರ್ತ್ ಹೇಳಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಮತ್ತು ಬಿಡಿ ತಂಡದೊಂದಿಗೆ ಪೊಲೀಸ್ ತಂಡವು ಐಇಡಿ ಪತ್ತೆ ಮಾಡಲು ಪಾಮುನೂರು ಗ್ರಾಮದ ಪಶ್ಚಿಮ ಮೀಸಲು ಪ್ರದೇಶಕ್ಕೆ ತೆರಳಿತು.

ಅರಣ್ಯದಲ್ಲಿ ಶೋಧ ಕಾರ್ಯಾಚರಣೆ ನಡೆಸುವಾಗ ರಸ್ತೆಯಲ್ಲಿ ವಿದ್ಯುತ್ ತಂತಿ ಕಂಡುಬಂದಿದೆ. ನಂತರ ಒಂದು ಬಿಯರ್ ಬಾಟಲ್ ನಲ್ಲಿ ಐಇಡಿ ಪತ್ತೆಯಾಗಿದೆ. ತಕ್ಷಣವೇ,ತಂಡವು ಬಾಂಬ್ ನಿಷ್ಕ್ರಿಯ ತಂಡದ ಸಹಾಯ ಪಡೆದು ಐಇಡಿ ವಶಕ್ಕೆ ಪಡೆಯಿತು ಎಂದು ಪ್ರಕಟಣೆ ತಿಳಿಸಿದೆ.  ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ವೆಂಕಟಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್ಪಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT