ಸಾಂದರ್ಭಿಕ ಚಿತ್ರ 
ದೇಶ

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿ ಅರ್ಜಿ: ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ತೀರ್ಮಾನ

ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ  ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದೆ. 

ನವದೆಹಲಿ: ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ  ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದೆ. 

ಶಾಲೆಯ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸುವ(Hijab row) ವಿಷಯದ ಕುರಿತು ಈ ಹಿಂದೆ ಸುಪ್ರೀಂ ಕೋರ್ಟ್‌(Supreme court) ಭಿನ್ನ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಿಕೊಂಡು ಬಂದರೆ ವಿದ್ಯಾರ್ಥಿನಿಯರಿಗೆ ಮಾರ್ಚ್ 9 ರಿಂದ ಪ್ರಾರಂಭವಾಗುವ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅನುಮತಿ ನೀಡಲಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ತಿಳಿಸಲಾಯಿತು. 

"ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಹೋದರೆ ಅವರನ್ನು ಪರೀಕ್ಷಾ ಹಾಲ್ ಒಳಗೆ ಕುಳಿತುಕೊಳ್ಳಲು, ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ. ವಿದ್ಯಾರ್ಥಿಗಳಿಗೆ ಸದ್ಯದಲ್ಲಿಯೇ ಪರೀಕ್ಷೆ ಇರುವುದರಿಂದ ಮುಂದಿನ ಸೋಮವಾರ ಅಥವಾ ಶುಕ್ರವಾರದಂದು ವಿಚಾರಣೆ ನಡೆಸಲು ನ್ಯಾಯಾಲಯವು ಪರಿಗಣಿಸಬಹುದು ಎಂದು ವಕೀಲ ಶಾದನ್ ಫರಾಸತ್ ಹೇಳಿದರು.

ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದರಿಂದ ಕೆಲವು ಹುಡುಗಿಯರು ಖಾಸಗಿ ಸಂಸ್ಥೆಗಳಿಗೆ ತೆರಳಿದ್ದಾರೆ, ಆದರೆ ಸರ್ಕಾರಿ ಸಂಸ್ಥೆಗಳಲ್ಲಿ ಪರೀಕ್ಷೆ ಬರೆಯಬೇಕಾಗಿದೆ ಎಂದು ಅವರು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು. ಅನುಮತಿ ನೀಡದಿದ್ದರೆ ಇನ್ನೊಂದು ವರ್ಷ ವಿದ್ಯಾರ್ಥಿನಿಯರು ತಮ್ಮ ಕಲಿಕಾ ವರ್ಷವನ್ನು ಕಳೆದುಕೊಳ್ಳುವ ಅಪಾಯವಿದೆ ಎಂದು ಅವರು ಹೇಳಿದರು. 

ಹಿಜಾಬ್ ಕುರಿತು ಭಿನ್ನ ತೀರ್ಪಿನಿಂದಾಗಿ, ಕರ್ನಾಟಕ ಹೈಕೋರ್ಟ್ ತೀರ್ಪನ್ನೇ ಇನ್ನೂ ಪರಿಗಣಿಸಲಾಗುತ್ತದೆ. ಕಳೆದ ವರ್ಷ ಅಕ್ಟೋಬರ್ 13 ರಂದು ವಿಭಜಿತ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಹಿಜಾಬ್ ವಿವಾದಕ್ಕೆ ಶಾಶ್ವತ ಪರಿಹಾರವನ್ನು ಅಂದು ನೀಡಲು ಸಾಧ್ಯವಾಗಿರಲಿಲ್ಲ. ವಿಭಜಿತ ತೀರ್ಪಿನ ಹಿನ್ನಲೆಯಲ್ಲಿ ಅಂದು ಇಬ್ಬರೂ ನ್ಯಾಯಾಧೀಶರು ವಿಷಯವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು. 

ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಪ್ರಕರಣದ ತೀರ್ಪು ನೀಡಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸುವುದಾಗಿ ಕಳೆದ ತಿಂಗಳು ಹೇಳಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT