ಮೊರ್ಬಿ ತೂಗು ಸೇತುವೆ ದುರಂತ 
ದೇಶ

ಮೊರ್ಬಿ ತೂಗು ಸೇತುವೆ ದುರಂತ: ತಲಾ 10 ಲಕ್ಷ ರೂ 'ಮಧ್ಯಂತರ ಪರಿಹಾರ' ನೀಡುವಂತೆ ಒರೆವಾ ಸಂಸ್ಥೆಗೆ ಹೈಕೋರ್ಟ್ ಆದೇಶ

ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ನ ಮೊರ್ಬಿ ತೂಗು ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ದುರಂತದ ಸಂತ್ರಸ್ಥರಿಗೆ ತಲಾ 10 ಲಕ್ಷ ರೂ ಮಧ್ಯಂತರ ಪರಿಹಾರ ನೀಡುವಂತೆ ಆದೇಶಿಸಿದೆ.

ಅಹ್ಮದಾಬಾದ್: ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ನ ಮೊರ್ಬಿ ತೂಗು ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ದುರಂತದ ಸಂತ್ರಸ್ಥರಿಗೆ ತಲಾ 10 ಲಕ್ಷ ರೂ ಮಧ್ಯಂತರ ಪರಿಹಾರ ನೀಡುವಂತೆ ಆದೇಶಿಸಿದೆ.

ಮೊರ್ಬಿ ತೂಗುಸೇತುವೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 10 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ಎರಡು ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ನೀಡುವಂತೆ ಗಡಿಯಾರ ತಯಾರಕ ಒರೆವಾ ಗ್ರೂಪ್‌ಗೆ ಗುಜರಾತ್ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ಅಲ್ಲದೆ ಈ ಪರಿಹಾರ ನೀಡಿಕೆಗೆ ಕೋರ್ಟ್  ನಾಲ್ಕು ವಾರಗಳ ಗಡುವು ಕೂಡ ನೀಡಿದೆ. 

ಸೇತುವೆಯ ನಿರ್ವಹಣೆಯ ಜವಾಬ್ದಾರಿಯನ್ನುಇದೇ ಒರೆವಾ ಕಂಪನಿಯು ಹೊಂದಿತ್ತು. ಮುಖ್ಯ ನ್ಯಾಯಮೂರ್ತಿ ಸೋನಿಯಾ ಗೋಕನಿ ಮತ್ತು ನ್ಯಾಯಮೂರ್ತಿ ಸಂದೀಪ್ ಭಟ್ ಅವರ ಪೀಠವು ಮಧ್ಯಂತರ ಪರಿಹಾರವನ್ನು ನೀಡುವಂತೆ ಕಂಪನಿಗೆ ಸೂಚಿಸಿದೆ. ಮಧ್ಯಂತರ ಪರಿಹಾರವಾಗಿ ಗಾಯಾಳುಗಳಿಗೆ ತಲಾ ಎರಡು ಲಕ್ಷ ರೂಪಾಯಿ ನೀಡುವಂತೆ ಕೋರ್ಟ್ ಆದೇಶಿಸಿದೆ. 

ಗುಜರಾತ್ ರಾಜ್ಯದ ಮೊರ್ಬಿ ಪಟ್ಟಣದ ಮಚ್ಚು ನದಿಯ ಮೇಲಿರುವ ತೂಗು ಸೇತುವೆ ಕಳೆದ ವರ್ಷ ಅಕ್ಟೋಬರ್ 30 ರಂದು ಕುಸಿದಿತ್ತು. ಈ ಅವಘಡದಲ್ಲಿ 135 ಮಂದಿ ಸಾವನ್ನಪ್ಪಿದ್ದು, 56 ಮಂದಿ ಗಾಯಗೊಂಡಿದ್ದರು. ಮಂಗಳವಾರ, ಒರೆವಾ ಗ್ರೂಪ್ ಹೈಕೋರ್ಟಿನ ಮುಂದೆ ಒಟ್ಟು ಐದು ಕೋಟಿ ರೂಪಾಯಿಗಳನ್ನು ಮಧ್ಯಂತರ ಪರಿಹಾರವಾಗಿ ತಮ್ಮ ಪ್ರಾಣ ಕಳೆದುಕೊಂಡವರು ಮತ್ತು ಗಾಯಗೊಂಡವರ ಮುಂದಿನ ಸಂಬಂಧಿಕರಿಗೆ ಪಾವತಿಸಲು ಪ್ರಸ್ತಾಪವನ್ನು ಮಾಡಿತು. ಆದರೆ, ಕಂಪನಿ ನೀಡಿರುವ ಪರಿಹಾರ ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT