ದೆಹಲಿ ಎಂಸಿಡಿಯಲ್ಲಿ ಮಾರಾಮಾರಿ 
ದೇಶ

ದೆಹಲಿ: ಎಂಸಿಡಿ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ವೇಳೆ ಮಾರಾಮಾರಿ, ಬಿಜೆಪಿಯಿಂದ ದಾಳಿ, ಮೇಯರ್ ಆರೋಪ- ವಿಡಿಯೋ

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಸದನದಲ್ಲಿ ಬುಧವಾರ ಸ್ಥಾಯಿ ಸಮಿತಿಯ ಸದಸ್ಯರ ಚುನಾವಣೆಯ ಸಂದರ್ಭದಲ್ಲಿ ಮಾರಾಮಾರಿ ನಡೆದಿದೆ. ಬಿಜೆಪಿ ಕೌನ್ಸಿಲರ್ ಗಳ ಸದನದಲ್ಲಿ ತಮ್ಮ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ನೂತನ ಮೇಯರ್ ಶೆಲ್ಲಿ ಒಬೆರಾಯ್ ಆರೋಪಿಸಿದ್ದಾರೆ.

ನವದೆಹಲಿ: ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಸದನದಲ್ಲಿ ಬುಧವಾರ ಸ್ಥಾಯಿ ಸಮಿತಿಯ ಸದಸ್ಯರ ಚುನಾವಣೆಯ ಸಂದರ್ಭದಲ್ಲಿ ಮಾರಾಮಾರಿ ನಡೆದಿದೆ. ಬಿಜೆಪಿ ಕೌನ್ಸಿಲರ್ ಗಳ ಸದನದಲ್ಲಿ ತಮ್ಮ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ನೂತನ ಮೇಯರ್ ಶೆಲ್ಲಿ ಒಬೆರಾಯ್ ಆರೋಪಿಸಿದ್ದಾರೆ. ಸ್ಥಾಯಿ ಸಮಿತಿ ಚುನಾವಣೆ ನಡೆಸುತ್ತಿದ್ದ ವೇಳೆ ತಮ್ಮ ಮೇಲೆ ಬಾಟಲಿಗಳನ್ನು ಎಸೆಯಲಾಗಿದೆ ಎಂದು ಅವರು ಹೇಳಿದ್ದಾರೆ. 

ಸುಪ್ರೀಂ ಕೋರ್ಟ್ ಆದೇಶದಂತೆ ಸ್ಥಾಯಿ ಸಮಿತಿ ಚುನಾವಣೆ ನಡೆಸುತ್ತಿದ್ದಾಗ ಬಿಜೆಪಿ ಕೌನ್ಸಿಲರ್‌ಗಳು ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ! ಇದು ಬಿಜೆಪಿಯ ಗುಂಡಾಗಿರಿಯಾಗಿದ್ದು, ಮಹಿಳಾ ಮೇಯರ್ ಮೇಲೆ ಅವರು ದಾಳಿ ನಡೆಸಲು ಪ್ರಯತ್ನಿಸಿದ್ದಾರೆ ಎಂದು ಒಬೆರಾಯ್ ಟ್ವೀಟ್ ಮಾಡಿದ್ದಾರೆ. 

ಮತಗಟ್ಟೆಗಳ ಒಳಗೆ ಮೊಬೈಲ್ ಫೋನ್‌ಗಳನ್ನು ಬಳಸಿ ಫೋಟೋ ತೆಗೆಯುವುದರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು.  ಸದನದ ಕಲಾಪಗಳ ಸಮಯದಲ್ಲಿ, ಬಿಜೆಪಿ ಕಾರ್ಪೊರೇಟರ್ ಶಿಖಾ ರೈ ಅವರು ಮೇಯರ್ ಬಳಿಗೆ ತೆರಳಿ ಮೈಕ್ ಕಸಿದುಕೊಳ್ಳಲು ಪ್ರಯತ್ನಿಸಿದರು ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್, ಈ ಘಟನೆ ಆತಂಕಕಾರಿಯಾಗಿದ್ದು,ಸ್ವೀಕರಿಸಲಾಗದು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT