ಎಂಸಿಡಿಯಲ್ಲಿ ಕುಸಿದು ಬಿದ್ದ ಎಎಪಿ ಸದಸ್ಯ 
ದೇಶ

ದೆಹಲಿ: ಎಂಸಿಡಿಯಲ್ಲಿ ಮತ್ತೆ ಎಎಪಿ, ಬಿಜೆಪಿ ಸದಸ್ಯರ ನಡುವೆ ಮಾರಾಮಾರಿ; ಕುಸಿದು ಬಿದ್ದ ಕೌನ್ಸಿಲರ್! ವಿಡಿಯೋ

ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ನಲ್ಲಿ (ಎಂಸಿಡಿ) ಮತ್ತೆ ಬಿಜೆಪಿ ಮತ್ತು ಎಎಪಿ ಕೌನ್ಸಿಲರ್ ಗಳ ನಡುವೆ ಮಾರಾಮಾರಿ ನಡೆದಿದೆ.ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಕೌನ್ಸಿಲರ್ ಗಳ ನಡುವೆ ಘರ್ಷಣೆ ಸಂಭವಿಸಿದೆ. ಉಭಯ ಪಕ್ಷಗಳ ಕೌನ್ಸಿಲರ್ ಗಳ ನಡುವೆ ಪರಸ್ಪರ ತಳ್ಳಾಟ, ಗಲಾಟೆ, ಹಲ್ಲೆ ನಡೆದಿದೆ.

ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ನಲ್ಲಿ (ಎಂಸಿಡಿ) ಮತ್ತೆ ಬಿಜೆಪಿ ಮತ್ತು ಎಎಪಿ ಕೌನ್ಸಿಲರ್ ಗಳ ನಡುವೆ ಮಾರಾಮಾರಿ ನಡೆದಿದೆ.

ಶುಕ್ರವಾರ ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ, ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಕೌನ್ಸಿಲರ್ ಗಳ ನಡುವೆ ಘರ್ಷಣೆ ಸಂಭವಿಸಿದ್ದು, ಉಭಯ ಪಕ್ಷಗಳ ಕೌನ್ಸಿಲರ್ ಗಳ ನಡುವೆ ಪರಸ್ಪರ ತಳ್ಳಾಟ, ಗಲಾಟೆ, ಹಲ್ಲೆ ನಡೆದಿದೆ. ಇದರಿಂದಾಗಿ ಕೌನ್ಸಿಲರ್ ಒಬ್ಬರು ಎಂಸಿಡಿ ಸದನದಲ್ಲಿ ಕುಸಿದು ಬಿದ್ದಿದ್ದಾರೆ.  

#WATCH | Ruckus breaks out at Delhi Civic Centre once again as AAP and BJP Councillors jostle, manhandle and rain blows on each other. This is the third day of commotions in the House. pic.twitter.com/Sfjz0osOSk

ಎಂಸಿಡಿಯಲ್ಲಿ ಮೂರನೇ ಬಾರಿಗೆ ಈ ರೀತಿಯ ಅಹಿತಕರ ಘಟನೆ ನಡೆದಿದೆ. ಫೆಬ್ರವರಿ 23 ರಂದು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ನಡೆಯುವಾಗ ಮಾರಾಮರಿ ನಡೆದಿದ್ದರಿಂದ ಇಂದಿಗೆ ಚುನಾವಣೆಯನ್ನು  ಮುಂದೂಡಲಾಗಿತ್ತು. ಇಂದು ಕೂಡಾ ಚುನಾವಣೆ ಸಂದರ್ಭದಲ್ಲಿ ಕೌನ್ಸಿಲರ್ ಗಳು ತಾವು ಜನರಿಂದ ಚುನಾಯಿತರಾದ ಪ್ರತಿನಿಧಿಗಳು ಎಂಬುದನ್ನು ಮರೆತು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಮಹಿಳಾ ಮೇಯರ್ ಶೆಲ್ಲಿ ಒಬೆರಾಯ್ ಮೇಲೆ ಹಲ್ಲೆ ನಡೆಸಿದ ಬಿಜೆಪಿಯ ಗೂಂಡಾಗಳು ತಮ್ಮ ಮೇಲೂ ಹಲ್ಲೆ ನಡೆಸಿರುವುದಾಗಿ ಹಲ್ಲೆಗೊಳಗಾದ ಎಎಪಿ ಕೌನ್ಸಿಲರ್ ಅಶೋಕ್ ಕುಮಾರ್ ಮಾನು ಮಾಧ್ಯಮಗಳ ಮುಂದೆ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT