ಅಶೋಕ್ ವಾಜಪೇಯಿ 
ದೇಶ

'ಸರ್ಕಾರವನ್ನು ಟೀಕಿಸುವ ಕವಿತೆ ಓದಬೇಡಿ ಎಂದಿದ್ದಕ್ಕೆ ಫೆಸ್ಟ್‌ನಲ್ಲಿ ಭಾಗವಹಿಸುತ್ತಿಲ್ಲ': ಅಶೋಕ್ ವಾಜಪೇಯಿ

ಸರ್ಕಾರವನ್ನು ಟೀಕಿಸುವ ಕವಿತೆಗಳನ್ನು ಓದದಂತೆ ಸಂಘಟಕರು ಕೇಳಿಕೊಂಡಿದ್ದರಿಂದ ತಾವು ಕಲ್ಚರ್ ಫೆಸ್ಟ್‌ನಲ್ಲಿ ಭಾಗವಹಿಸುತ್ತಿಲ್ಲ ಎಂದು ಕವಿ ಅಶೋಕ್ ವಾಜಪೇಯಿ ಅವರು ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಸರ್ಕಾರವನ್ನು ಟೀಕಿಸುವ ಕವಿತೆಗಳನ್ನು ಓದದಂತೆ ಸಂಘಟಕರು ಕೇಳಿಕೊಂಡಿದ್ದರಿಂದ ತಾವು ಕಲ್ಚರ್ ಫೆಸ್ಟ್‌ನಲ್ಲಿ ಭಾಗವಹಿಸುತ್ತಿಲ್ಲ ಎಂದು ಕವಿ ಅಶೋಕ್ ವಾಜಪೇಯಿ ಅವರು ಶುಕ್ರವಾರ ಹೇಳಿದ್ದಾರೆ.

ತಮ್ಮನ್ನು ಸೆನ್ಸಾರ್ ಮಾಡಲಾಗುತ್ತಿದೆ ಎಂಬ ವಾಜಪೇಯಿ ಅವರ ಹೇಳಿಕೆಯನ್ನು ಉತ್ಸವದ ಸಹ-ಸಂಘಟಕರಾಗಿರುವ ರೇಖ್ತಾ ಫೌಂಡೇಶನ್‌ನ ವಕ್ತಾರರು ತಳ್ಳಿಹಾಕಿದ್ದಾರೆ.

ಸುಂದರ್ ನರ್ಸರಿಯಲ್ಲಿ ಝೀ ಆಯೋಜಿಸಿದ್ದ ಮೂರು ದಿನಗಳ ಆರ್ತ್ ಕಲ್ಚರ್ ಫೆಸ್ಟ್‌ನಲ್ಲಿ ಶುಕ್ರವಾರ ನಡೆದ ಕವಿಗೋಷ್ಠಿಯಲ್ಲಿ ಅನಾಮಿಕಾ, ಬದ್ರಿ ನಾರಾಯಣ್, ದಿನೇಶ್ ಕುಶ್ವಾಹಾ ಮತ್ತು ಮಾನವ್ ಕೌಲ್ ಸೇರಿದಂತೆ ಇತರ ಕವಿಗಳೊಂದಿಗೆ ವಾಜಪೇಯಿ ಅವರು ಪಾಲ್ಗೊಳ್ಳಬೇಕಿತ್ತು.

"ರಾಜಕೀಯ ಅಥವಾ ಸರ್ಕಾರವನ್ನು ನೇರವಾಗಿ ಟೀಕಿಸುವ ಕವಿತೆಗಳನ್ನು ಓದಬೇಡಿ ಎಂದು ನನ್ನನ್ನು ಕೇಳಿಕೊಂಡಿರುವುದರಿಂದ ಅರ್ಥ್ ಮತ್ತು ರೇಖ್ತಾ ಆಯೋಜಿಸಿರುವ ಸಂಸ್ಕೃತಿ ಉತ್ಸವದಲ್ಲಿ ನಾನು ಭಾಗವಹಿಸುವುದಿಲ್ಲ. ಈ ರೀತಿಯ ಸೆನ್ಸಾರ್ಶಿಪ್ ಅನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ" ಎಂದು 82 ವರ್ಷದ ಕವಿ ವಾಜಪೇಯಿ ಅವರು ಫೇಸ್‌ಬುಕ್‌ನಲ್ಲಿ ಹಿಂದಿಯಲ್ಲಿ ಬರೆದಿದ್ದಾರೆ.

ರೇಖ್ತಾ ಫೌಂಡೇಶನ್ ವಕ್ತಾರರು ವಾಜಪೇಯಿ ಅವರ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ರೇಖ್ತಾ ಅಥವಾ ಝೀ ನ ಯಾವುದೇ ಸಂಘಟಕರು ಯಾರಿಗೂ ಇಂತಹದ್ದೆ ಕವಿತೆಗಳನ್ನು ಓದಬೇಕು ಎಂದು ಹೇಳಿಲ್ಲ ಎಂದಿದ್ದಾರೆ.

"ಅವರು ಫೆಸ್ಟ್ ನಲ್ಲಿ ಏನು ಹೇಳಲು ಬಯಸುತ್ತಿದ್ದಾರೆಂದು ನಾವು ಪ್ರತಿಯೊಬ್ಬರನ್ನು ಕೇಳಿದೆವು. ಅದನ್ನು ಕಾರ್ಯಕ್ರಮದಲ್ಲಿ ಅವರ ಪರಿಚಯಕ್ಕೆ ಸೇರಿಸುವುದಕ್ಕಾಗಿ ಮಾತ್ರ ಕೇಳಲಾಗಿದೆ. ನಾವು ಅಥವಾ ಝೀ ಅವರಿಗೆ ರಾಜಕೀಯಕ್ಕೆ ಸಂಬಂಧಿಸಿದಂತೆ ಏನನ್ನೂ ಓದಬೇಡಿ ಎಂದು ಹೇಳಿಲ್ಲ. ಅದು ನಿಜವಾಗಿದ್ದರೆ, ನಾವು ಎಲ್ಲರಿಗೂ ಅದನ್ನೇ ಹೇಳುತ್ತಿದ್ದೇವು ಎಂದು ರೇಖ್ತಾ ಫೌಂಡೇಶನ್‌ನ ಸಂವಹನ ಮುಖ್ಯಸ್ಥ ಸತೀಶ್ ಗುಪ್ತಾ ಪಿಟಿಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT