ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢದಲ್ಲಿ ಟ್ರಕ್- ವ್ಯಾನ್ ನಡುವೆ ಭೀಕರ ಅಪಘಾತ: ನಾಲ್ಕು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 11 ಮಂದಿ ಸ್ಥಳದಲ್ಲೇ ಸಾವು

ಬಲೋಡಾ ಬಜಾರ್ - ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಟ್ರಕ್‌ ಹಾಗೂ ವ್ಯಾನ್‌ ನಡುವೆ ಡಿಕ್ಕಿ ಸಂಭವಿಸಿದ್ದು, 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಯ್‌ಪುರ: ಬಲೋಡಾ ಬಜಾರ್ - ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಟ್ರಕ್‌ ಹಾಗೂ ವ್ಯಾನ್‌ ನಡುವೆ ಡಿಕ್ಕಿ ಸಂಭವಿಸಿದ್ದು, 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಯಾಣಿಕರೆಲ್ಲರೂ ಸಂಬಂಧಿಕರಾಗಿದ್ದು, ಗುರುವಾರ ತಡರಾತ್ರಿ ಕೌಟುಂಬಿಕ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ

ರಸ್ತೆ ಅಪಘಾತದಲ್ಲಿ ಸುಮಾರು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಟಪಾರಾ ಆಸ್ಪತ್ರೆ ಮತ್ತು ಬಲೋಡಾ ಬಜಾರ್‌ಗೆ ದಾಖಲಿಸಲಾಗಿದೆ. ತಡರಾತ್ರಿ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಭಟಪಾರಾ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೃತ ಪಟ್ಟವರನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ ಎಂದು ಎಸ್‌ಐ ಸಂಜೀವ್ ಸಿಂಗ್ ರಜಪೂತ್ ತಿಳಿಸಿದ್ದಾರೆ.

ಪಿಕಪ್‌ ವಾಹನದಲ್ಲಿದ್ದ ಎಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಕುಟುಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಖಿಲೋರಾ ಗ್ರಾಮದಿಂದ ಅರ್ಜುನಿ ಗ್ರಾಮಕ್ಕೆ ತೆರಳಿದ್ದರು. ಅಪಘಾತದ ಬಗ್ಗೆ ಮಾಹಿತಿ ಪಡೆದ ಭಟಪಾರ ಪೊಲೀಸರು ತಡರಾತ್ರಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಕಾರ್ಯಕ್ರಮ ಮುಗಿಸಿ ಸಂಬಂಧಿಕರು ಪಿಕಪ್‌ ವಾಹನದಲ್ಲಿ ಅರ್ಜುನಿಯಿಂದ ತಮ್ಮ ಗ್ರಾಮ ಖಿಲೋರಾಗೆ ಹಿಂತಿರುಗುತ್ತಿದ್ದರು. ಈ ಮಧ್ಯೆ, ರಾತ್ರಿ 12 ಗಂಟೆ ಸುಮಾರಿಗೆ ಖಮಾರಿಯಾದ ಡಿಪಿಡಬ್ಲ್ಯುಎಸ್ ಶಾಲೆಯ ಬಳಿ ವೇಗವಾಗಿ ಬಂದ ಟ್ರಕ್‌ ಮತ್ತು ಪಿಕಪ್ ವಾಹನದ ಮಧ್ಯೆ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಪಿಕಪ್ ವಾಹನ ಉರುಳಿ ಬಿದ್ದಿತ್ತು. ಅಪಘಾತದಲ್ಲಿ 4 ಮಕ್ಕಳು ಸೇರಿದಂತೆ 11 ಮಂದಿ ದಾರುಣ ಸಾವಾಗಿದೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜಿಲ್ಲಾಸ್ಪತ್ರೆ ಹಾಗೂ ಇತರ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಮೂವರು ಗಾಯಾಳುಗಳನ್ನು ರಾಯ್‌ಪುರಕ್ಕೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT