ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ - ಡಾ. ದೇವಿಸಿಂಗ್ ಆರ್ ಶೇಖಾವತ್ 
ದೇಶ

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ಡಾ ದೇವಿಸಿಂಗ್ ಆರ್.ಶೇಖಾವತ್ ನಿಧನ, ಅಂತ್ಯಕ್ರಿಯೆ ಇಂದು

ಶಿಕ್ಷಣ ತಜ್ಞ ಮತ್ತು ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ಡಾ. ದೇವಿಸಿಂಗ್ ರಾಂಸಿಂಗ್ ಶೇಖಾವತ್ ಶುಕ್ರವಾರ ಬೆಳಿಗ್ಗೆ ಇಲ್ಲಿ ನಿಧನರಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪುಣೆ: ಶಿಕ್ಷಣ ತಜ್ಞ ಮತ್ತು ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ಡಾ. ದೇವಿಸಿಂಗ್ ರಾಂಸಿಂಗ್ ಶೇಖಾವತ್ ಶುಕ್ರವಾರ ಬೆಳಿಗ್ಗೆ ಇಲ್ಲಿ ನಿಧನರಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

88 ವರ್ಷ ವಯಸ್ಸಿನ ಅವರು ಕೆಇಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ ಮಾಜಿ ರಾಷ್ಟ್ರಪತಿ ಪತ್ನಿ ಪ್ರತಿಭಾ ಪಾಟೀಲ್, ಮಗ ರಾಜೇಂದ್ರ ಸಿಂಗ್ ಶೇಖಾವತ್, ಕಾಂಗ್ರೆಸ್ ನಾಯಕಿ ಮತ್ತು ಪುತ್ರಿ ಜ್ಯೋತಿ ರಾಥೋಡ್ ಅವರು ಇದ್ದರು.

ಮೂಲಗಳ ಪ್ರಕಾರ, ಫೆಬ್ರುವರಿ 12 ರಂದು ಪುಣೆಯಲ್ಲಿ ತಮ್ಮ ಮನೆಯ ಹೊರಗೆ ಬೆಳಿಗ್ಗೆ ಹುಲ್ಲುಹಾಸಿನ ಮೇಲೆ ಶೇಖಾವತ್ ಕುಸಿದು ಬಿದ್ದಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಅವರು ಅಧಿಕ ರಕ್ತದೊತ್ತಡ, ಮೂತ್ರಪಿಂಡ ವೈಫಲ್ಯ ಸೇರಿದಂತೆ ಇತರೆ ತೊಡಕುಗಳನ್ನು ಎದುರಿಸಿದರು. ಇದುವೇ ಅವರ ಮರಣಕ್ಕೆ ಕಾರಣವಾಯಿತು.

ಲಭ್ಯವಿರುವ ಮಾಹಿತಿಯ ಪ್ರಕಾರ, ಶೇಖಾವತ್ ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 7 ಗಂಟೆಗೆ ವೈಕುಂಠಧಾಮ್ ಸ್ಮಶಾನದಲ್ಲಿ ನೆರವೇರಿಸಲಾಗುವುದು ಎನ್ನಲಾಗಿದೆ.

ಭಾರತದ ಮೊದಲ ಮಹಿಳಾ ರಾಷ್ಟ್ರಪತಿಯಾಗಿದ್ದ (2007-2012) ಅವರ ಪತ್ನಿ ಪ್ರತಿಭಾ (89) ತಮ್ಮ ಗಂಡನ ಹಠಾತ್ ನಿಧನದಿಂದಾಗಿ ಆಘಾತಕ್ಕೊಳಗಾಗಿದ್ದಾರೆ ಮತ್ತು ಅವರ ಕುಟುಂಬ ಸದಸ್ಯರು ಸಾಂತ್ವನ ವ್ಯಕ್ತಪಡಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒಬ್ಬ ಕೃಷಿಕ ಮತ್ತು ಶಿಕ್ಷಣತಜ್ಞರಾಗಿದ್ದ ಶೇಖಾವತ್ ರಾಜಕಾರಣಿಯಾಗಿ ಬದಲಾಗಿದ್ದರು. ಅಮರಾವತಿಯಿಂದ ಬಂದವರು. ಅಲ್ಲಿ ಅವರು ಮೊದಲ ಮೇಯರ್ ಆಗಿ (1991-1992) ಮತ್ತು ಮಹಾರಾಷ್ಟ್ರ ಶಾಸಕರಾಗಿ (1985-1990) ಸೇವೆ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT