ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ - ಡಾ. ದೇವಿಸಿಂಗ್ ಆರ್ ಶೇಖಾವತ್ 
ದೇಶ

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ಡಾ ದೇವಿಸಿಂಗ್ ಆರ್.ಶೇಖಾವತ್ ನಿಧನ, ಅಂತ್ಯಕ್ರಿಯೆ ಇಂದು

ಶಿಕ್ಷಣ ತಜ್ಞ ಮತ್ತು ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ಡಾ. ದೇವಿಸಿಂಗ್ ರಾಂಸಿಂಗ್ ಶೇಖಾವತ್ ಶುಕ್ರವಾರ ಬೆಳಿಗ್ಗೆ ಇಲ್ಲಿ ನಿಧನರಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪುಣೆ: ಶಿಕ್ಷಣ ತಜ್ಞ ಮತ್ತು ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ಡಾ. ದೇವಿಸಿಂಗ್ ರಾಂಸಿಂಗ್ ಶೇಖಾವತ್ ಶುಕ್ರವಾರ ಬೆಳಿಗ್ಗೆ ಇಲ್ಲಿ ನಿಧನರಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

88 ವರ್ಷ ವಯಸ್ಸಿನ ಅವರು ಕೆಇಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ ಮಾಜಿ ರಾಷ್ಟ್ರಪತಿ ಪತ್ನಿ ಪ್ರತಿಭಾ ಪಾಟೀಲ್, ಮಗ ರಾಜೇಂದ್ರ ಸಿಂಗ್ ಶೇಖಾವತ್, ಕಾಂಗ್ರೆಸ್ ನಾಯಕಿ ಮತ್ತು ಪುತ್ರಿ ಜ್ಯೋತಿ ರಾಥೋಡ್ ಅವರು ಇದ್ದರು.

ಮೂಲಗಳ ಪ್ರಕಾರ, ಫೆಬ್ರುವರಿ 12 ರಂದು ಪುಣೆಯಲ್ಲಿ ತಮ್ಮ ಮನೆಯ ಹೊರಗೆ ಬೆಳಿಗ್ಗೆ ಹುಲ್ಲುಹಾಸಿನ ಮೇಲೆ ಶೇಖಾವತ್ ಕುಸಿದು ಬಿದ್ದಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಅವರು ಅಧಿಕ ರಕ್ತದೊತ್ತಡ, ಮೂತ್ರಪಿಂಡ ವೈಫಲ್ಯ ಸೇರಿದಂತೆ ಇತರೆ ತೊಡಕುಗಳನ್ನು ಎದುರಿಸಿದರು. ಇದುವೇ ಅವರ ಮರಣಕ್ಕೆ ಕಾರಣವಾಯಿತು.

ಲಭ್ಯವಿರುವ ಮಾಹಿತಿಯ ಪ್ರಕಾರ, ಶೇಖಾವತ್ ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 7 ಗಂಟೆಗೆ ವೈಕುಂಠಧಾಮ್ ಸ್ಮಶಾನದಲ್ಲಿ ನೆರವೇರಿಸಲಾಗುವುದು ಎನ್ನಲಾಗಿದೆ.

ಭಾರತದ ಮೊದಲ ಮಹಿಳಾ ರಾಷ್ಟ್ರಪತಿಯಾಗಿದ್ದ (2007-2012) ಅವರ ಪತ್ನಿ ಪ್ರತಿಭಾ (89) ತಮ್ಮ ಗಂಡನ ಹಠಾತ್ ನಿಧನದಿಂದಾಗಿ ಆಘಾತಕ್ಕೊಳಗಾಗಿದ್ದಾರೆ ಮತ್ತು ಅವರ ಕುಟುಂಬ ಸದಸ್ಯರು ಸಾಂತ್ವನ ವ್ಯಕ್ತಪಡಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒಬ್ಬ ಕೃಷಿಕ ಮತ್ತು ಶಿಕ್ಷಣತಜ್ಞರಾಗಿದ್ದ ಶೇಖಾವತ್ ರಾಜಕಾರಣಿಯಾಗಿ ಬದಲಾಗಿದ್ದರು. ಅಮರಾವತಿಯಿಂದ ಬಂದವರು. ಅಲ್ಲಿ ಅವರು ಮೊದಲ ಮೇಯರ್ ಆಗಿ (1991-1992) ಮತ್ತು ಮಹಾರಾಷ್ಟ್ರ ಶಾಸಕರಾಗಿ (1985-1990) ಸೇವೆ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT