ಜಗದೀಪ್ ಧನಕರ್, ರಘುರಾಮ್ ರಾಜನ್ 
ದೇಶ

ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ವಿರುದ್ಧ ಉಪರಾಷ್ಟ್ರಪತಿ ಧನಕರ್ ವಾಗ್ದಾಳಿ

ಆರ್ ಬಿಐ ನಂತಹ ಪ್ರಮುಖ ಹುದ್ದೆಗಳಲ್ಲಿ ಭಾರತದಲ್ಲಿ ಅಲ್ಪಾವಧಿಗೆ ಕೆಲಸ ಮಾಡಿರುವ ಕೆಲವು  ವಿದೇಶಿ ತಜ್ಞರು, ತಮ್ಮ ದೇಶಕ್ಕೆ ಮರಳಿದ ನಂತರ ನೀಡುವ ಹೇಳಿಕೆಯನ್ನು ದೇಶದ ಜನರು ಗಂಭೀರವಾಗಿ ಪರಿಗಣಿಸಬಾರದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.  

ನವದೆಹಲಿ: ಆರ್ ಬಿಐ ನಂತಹ ಪ್ರಮುಖ ಹುದ್ದೆಗಳಲ್ಲಿ ಭಾರತದಲ್ಲಿ ಅಲ್ಪಾವಧಿಗೆ ಕೆಲಸ ಮಾಡಿರುವ ಕೆಲವು  ವಿದೇಶಿ ತಜ್ಞರು, ತಮ್ಮ ದೇಶಕ್ಕೆ ಮರಳಿದ ನಂತರ ನೀಡುವ ಹೇಳಿಕೆಯನ್ನು ದೇಶದ ಜನರು ಗಂಭೀರವಾಗಿ ಪರಿಗಣಿಸಬಾರದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.  

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ 61 ನೇ ಘಟಿಕೋತ್ಸವ ಉದ್ಘಾಟಿಸಿ ಮಾತನಾಡಿದ ಧನಕರ್, ಸತತ ಪ್ರಯತ್ನಗಳ ನಂತರ ಭಾರತ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ.ಆದರೂ, ಕೆಲವು ಜನರು ಭಾರತದ ಆರ್ಥಿಕತೆ ಬಗ್ಗೆ ತಪ್ಪು ಕಲ್ಪನೆ ಹರಡುತ್ತಿದ್ದಾರೆ ಎಂದು ಅವರು ಹೇಳುವ ಮೂಲಕ ರಘುರಾಮ್ ರಾಜನ್ ವಿರುದ್ಧ ವಾಗ್ದಾಳಿ ನಡೆಸಿದರು.

ಈ ರಾಷ್ಟ್ರಕ್ಕಾಗಿ ಬೆವರು ಹರಿಸುವವರ ಸಾಧನೆಗಳನ್ನು ಕುಗ್ಗಿಸಲು, ಕಳಂಕ ತರಲು ಪ್ರಯತ್ನಿಸುವ ಯಾರೊಬ್ಬರಿಗೂ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು. ಕೆಲವರು ಆರ್ ಬಿಐ ನಂತಹ ಪ್ರಮುಖ ಸಂಸ್ಥೆಯಲ್ಲಿ ಕೆಲಸ ಮಾಡಿರುತ್ತಾರೆ. ಹೊರ ದೇಶದಿಂದ ಬಂದು, ಪ್ರಮುಖ ಸ್ಥಾನ ಅಲಂಕರಿಸಿದ್ದವರು ತಮ್ಮ ಸ್ವದೇಶಕ್ಕೆ ಮರಳಿದಾಗ ಭಾರತ ಆಹಾರ ಬಿಕ್ಕಟ್ಟು ಎದುರಿಸುತ್ತಿದೆ ಎಂದು ಟೀಕಿಸುತ್ತಾರೆ.

ಇಂತಹ ಜನರು 2020 ರಿಂದ 80 ಕೋಟಿ ಜನರಿಗೆ ಸರ್ಕಾರ ಉಚಿತ ಆಹಾರ ಧಾನ್ಯ ವಿತರಣೆ ಮಾಡಿರುವುದನ್ನು ತಿಳಿದಿಲ್ಲ, ಅಂತವರ ಹೇಳಿಕೆಯನ್ನು ವಿಶೇಷವಾಗಿ ಯುವ ಜನತೆ ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT