ಜಗದೀಪ್ ಧನಕರ್, ರಘುರಾಮ್ ರಾಜನ್ 
ದೇಶ

ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ವಿರುದ್ಧ ಉಪರಾಷ್ಟ್ರಪತಿ ಧನಕರ್ ವಾಗ್ದಾಳಿ

ಆರ್ ಬಿಐ ನಂತಹ ಪ್ರಮುಖ ಹುದ್ದೆಗಳಲ್ಲಿ ಭಾರತದಲ್ಲಿ ಅಲ್ಪಾವಧಿಗೆ ಕೆಲಸ ಮಾಡಿರುವ ಕೆಲವು  ವಿದೇಶಿ ತಜ್ಞರು, ತಮ್ಮ ದೇಶಕ್ಕೆ ಮರಳಿದ ನಂತರ ನೀಡುವ ಹೇಳಿಕೆಯನ್ನು ದೇಶದ ಜನರು ಗಂಭೀರವಾಗಿ ಪರಿಗಣಿಸಬಾರದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.  

ನವದೆಹಲಿ: ಆರ್ ಬಿಐ ನಂತಹ ಪ್ರಮುಖ ಹುದ್ದೆಗಳಲ್ಲಿ ಭಾರತದಲ್ಲಿ ಅಲ್ಪಾವಧಿಗೆ ಕೆಲಸ ಮಾಡಿರುವ ಕೆಲವು  ವಿದೇಶಿ ತಜ್ಞರು, ತಮ್ಮ ದೇಶಕ್ಕೆ ಮರಳಿದ ನಂತರ ನೀಡುವ ಹೇಳಿಕೆಯನ್ನು ದೇಶದ ಜನರು ಗಂಭೀರವಾಗಿ ಪರಿಗಣಿಸಬಾರದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.  

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ 61 ನೇ ಘಟಿಕೋತ್ಸವ ಉದ್ಘಾಟಿಸಿ ಮಾತನಾಡಿದ ಧನಕರ್, ಸತತ ಪ್ರಯತ್ನಗಳ ನಂತರ ಭಾರತ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ.ಆದರೂ, ಕೆಲವು ಜನರು ಭಾರತದ ಆರ್ಥಿಕತೆ ಬಗ್ಗೆ ತಪ್ಪು ಕಲ್ಪನೆ ಹರಡುತ್ತಿದ್ದಾರೆ ಎಂದು ಅವರು ಹೇಳುವ ಮೂಲಕ ರಘುರಾಮ್ ರಾಜನ್ ವಿರುದ್ಧ ವಾಗ್ದಾಳಿ ನಡೆಸಿದರು.

ಈ ರಾಷ್ಟ್ರಕ್ಕಾಗಿ ಬೆವರು ಹರಿಸುವವರ ಸಾಧನೆಗಳನ್ನು ಕುಗ್ಗಿಸಲು, ಕಳಂಕ ತರಲು ಪ್ರಯತ್ನಿಸುವ ಯಾರೊಬ್ಬರಿಗೂ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು. ಕೆಲವರು ಆರ್ ಬಿಐ ನಂತಹ ಪ್ರಮುಖ ಸಂಸ್ಥೆಯಲ್ಲಿ ಕೆಲಸ ಮಾಡಿರುತ್ತಾರೆ. ಹೊರ ದೇಶದಿಂದ ಬಂದು, ಪ್ರಮುಖ ಸ್ಥಾನ ಅಲಂಕರಿಸಿದ್ದವರು ತಮ್ಮ ಸ್ವದೇಶಕ್ಕೆ ಮರಳಿದಾಗ ಭಾರತ ಆಹಾರ ಬಿಕ್ಕಟ್ಟು ಎದುರಿಸುತ್ತಿದೆ ಎಂದು ಟೀಕಿಸುತ್ತಾರೆ.

ಇಂತಹ ಜನರು 2020 ರಿಂದ 80 ಕೋಟಿ ಜನರಿಗೆ ಸರ್ಕಾರ ಉಚಿತ ಆಹಾರ ಧಾನ್ಯ ವಿತರಣೆ ಮಾಡಿರುವುದನ್ನು ತಿಳಿದಿಲ್ಲ, ಅಂತವರ ಹೇಳಿಕೆಯನ್ನು ವಿಶೇಷವಾಗಿ ಯುವ ಜನತೆ ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!