ಪ್ರಾತಿನಿಧಿಕ ಚಿತ್ರ 
ದೇಶ

ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಉರುಳಿದ ಟ್ರಕ್, 4 ವರ್ಷದ ಬಾಲಕ ಸೇರಿ ನಾಲ್ವರು ಸಾವು

ಶನಿವಾರ ಮುಂಜಾನೆ ಮಧ್ಯ ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ಎಂಸಿಡಿ ಟ್ರಕ್ ಪಲ್ಟಿಯಾಗಿ ನಾಲ್ಕು ವರ್ಷದ ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಶನಿವಾರ ಮುಂಜಾನೆ ಮಧ್ಯ ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ಎಂಸಿಡಿ ಟ್ರಕ್ ಪಲ್ಟಿಯಾಗಿ ನಾಲ್ಕು ವರ್ಷದ ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂದ್ ಪರ್ಬತ್‌ನ ರಸ್ತೆ ಸಂಖ್ಯೆ 10ರಲ್ಲಿ ಟ್ರಕ್ ಪಲ್ಟಿಯಾಗಿದೆ ಎಂದು ಪೊಲೀಸರಿಗೆ ಮುಂಜಾನೆ 1.30ರ ಸುಮಾರಿಗೆ ಮಾಹಿತಿ ಲಭ್ಯವಾಗಿದೆ. ಕಾರ್ಮಿಕರು ಸೇರಿದಂತೆ ಕೆಲವು ಜನರು ಅದರ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಗೆ ಸೇರಿದ ಟ್ರಕ್ ಅನ್ನು ಕ್ರೇನ್ ಸಹಾಯದಿಂದ ಮೇಲಕ್ಕೆತ್ತಲಾಯಿತು. ಸ್ಥಳದಲ್ಲೇ ಮೃತಪಟ್ಟಿರುವ ಮೂವರ ಮೃತದೇಹಗಳು ಮತ್ತು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಹೊರತೆಗೆಯಲಾಯಿತು ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ಸಂಜಯ್ ಕುಮಾರ್ ಸೇನ್ ತಿಳಿಸಿದ್ದಾರೆ.

ಗಾಯಾಳು ಕಿಲ್ಲು (40) ಅವರನ್ನು ಸಮೀಪದ ಜೀವನ್ ಮಾಲಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಕಿಲ್ಲು ಅವರ ಪುತ್ರ ಅನುಜ್ (4), ರಮೇಶ್ (30) ಮತ್ತು ಸೋನಮ್ (25) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮಧ್ಯಪ್ರದೇಶದ ಟಿಕಮ್‌ಗಢ್‌ನವರು. ಅಪಘಾತ ಸಂಭವಿಸಿದಾಗ ಬಾಲಕ ಆ ಪ್ರದೇಶದಲ್ಲಿ ಆಟವಾಡುತ್ತಿದ್ದನು ಎಂದು ಡಿಸಿಪಿ ಹೇಳಿದ್ದಾರೆ.

ವೇಗವಾಗಿ ಬಂದ ಟ್ರಕ್‌ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಟ್ರಕ್ ಚಾಲಕ ಇನ್ನೂ ಪತ್ತೆ ಮಾಡಲಾಗಿಲ್ಲ, ಮೃತದೇಹಗಳನ್ನು ರಾಮ್ ಮನೋಹರ್ ಲೋಹಿಯಾ (ಆರ್‌ಎಂಎಲ್) ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಕಾರ್ಮಿಕ ಮೋತಿ (40) ಅವರ ಹೇಳಿಕೆಯ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ