ಬಿಜೆಪಿ ಟ್ವೀಟ್ ಮಾಡಿರುವ ಪೋಸ್ಟರ್ 
ದೇಶ

ದೆಹಲಿ ಮಹಾನಗರ ಪಾಲಿಕೆಯಲ್ಲಿ ಹಿಂಸಾಚಾರಕ್ಕೆ ಎಎಪಿ 'ವಿಲನ್' ಅತಿಶಿ ಕಾರಣ: ಬಿಜೆಪಿ

ಎಎಪಿ ಶಾಸಕ ಅತಿಶಿ ಅವರನ್ನು "ಖಳನಾಯಕಿ" ಎಂದು ಕರೆದಿರುವ ಬಿಜೆಪಿ, ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ)ಯ ಆರು ಸದಸ್ಯರ ಸ್ಥಾಯಿ ಸಮಿತಿ ಚುನಾವಣೆ ವೇಳೆ ಸದನದಲ್ಲಿ ನಡೆದ ಗಲಾಟೆಗೆ ಆಪ್ ಶಾಸಕಿಯೇ ಕಾರಣ ಎಂದು ಶನಿವಾರ...

ನವದೆಹಲಿ: ಎಎಪಿ ಶಾಸಕ ಅತಿಶಿ ಅವರನ್ನು "ಖಳನಾಯಕಿ" ಎಂದು ಕರೆದಿರುವ ಬಿಜೆಪಿ, ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ)ಯ ಆರು ಸದಸ್ಯರ ಸ್ಥಾಯಿ ಸಮಿತಿ ಚುನಾವಣೆ ವೇಳೆ ಸದನದಲ್ಲಿ ನಡೆದ ಗಲಾಟೆಗೆ ಆಪ್ ಶಾಸಕಿಯೇ ಕಾರಣ ಎಂದು ಶನಿವಾರ ತರಾಟೆಗೆ ತೆಗೆದುಕೊಂಡಿದೆ.

ದೆಹಲಿ ಮೇಯರ್ ಶೆಲ್ಲಿ ಒಬೆರಾಯ್ ಅವರೊಂದಿಗೆ ಆಮ್ ಆದ್ಮಿ ಪಕ್ಷದ(ಎಎಪಿ) ಶಾಸಕರಾದ ಅತಿಶಿ ಮತ್ತು ದುರ್ಗೇಶ್ ಪಾಠಕ್ ಅವರ ಮಾರ್ಫ್ ಮಾಡಿದ ಚಿತ್ರಗಳಿರುವ ಅಣಕು ಚಿತ್ರದ ಪೋಸ್ಟರ್ ಅನ್ನು ಹಂಚಿಕೊಂಡಿರುವ ದೆಹಲಿ ಬಿಜೆಪಿ, "ಸದನದಲ್ಲಿ ಹಿಂಸಾಚಾರ ನಡೆಸಿದ್ದು ಮತ್ತು ಸರ್ವಾಧಿಕಾರಿ ರೀತಿ ವರ್ತಿಸಿದ್ದು ಎಎಪಿಯ 'ಖಳನಾಯಕ'ರು ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದೆ.

ಈ ಬಗ್ಗೆ ಶಾಸಕಿಯಿಂದ ಅಥವಾ ಎಎಪಿಯಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ಹೌಸ್ ಬಿಜೆಪಿ ಕೌನ್ಸಿಲರ್‌ಗಳ ಭಾರೀ ಪ್ರತಿಭಟನೆಗೆ ಸಾಕ್ಷಿಯಾದ ನಂತರ ಚುನಾವಣೆಯ ಸಮಯದಲ್ಲಿ ಚಲಾಯಿಸಿದ ಮತವನ್ನು "ಅಸಿಂಧು" ಎಂದು ಘೋಷಿಸಲಾಗಿದೆ.

ಶುಕ್ರವಾರ ಪ್ರಮುಖ ಆರು ಸದಸ್ಯರ ಸ್ಥಾಯಿ ಸಮಿತಿಗೆ ನಡೆದ ಚುನಾವಣೆ ವೇಳೆ ಮೇಯರ್ ಶೆಲ್ಲಿ ಒಬೆರಾಯ್ ಒಂದು ಮತವನ್ನು ಅಸಿಂಧುಗೊಳಿಸುತ್ತಿದ್ದಂತೆಯೇ  ಉಭಯ ಪಕ್ಷಗಳ ಕೌನ್ಸಿಲರ್ ಗಳು ಕೂಗಾಟದ ನಡುವೆ ಪರಸ್ಪರ ತಳ್ಳಾಟ, ನೂಕಾಟ ನಡೆದು ಹೊಡೆದಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT