ರಾಯ್ ಪುರದಲ್ಲಿ ಅಧಿವೇಶನದಲ್ಲಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ 
ದೇಶ

ಮಹಿಳೆಯರು, ಅಲ್ಪಸಂಖ್ಯಾತರು, ದಲಿತರನ್ನು ಗುರಿಯಾಗಿಸಿಕೊಂಡು ಬಿಜೆಪಿ ದ್ವೇಷದ ಬೆಂಕಿ ಹರಡುತ್ತಿದೆ: ಸೋನಿಯಾ ಗಾಂಧಿ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಕೀಯ ನಿವೃತ್ತಿ ಬಗ್ಗೆ ನಿರ್ಧರಿಸಿದ್ದಾರೆಯೇ?ಅವರು ಇಂದು ರಾಯ್ ಪುರದಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಅಧಿವೇಶನದಲ್ಲಿ ಆಡಿರುವ ಮಾತುಗಳು ಅವರ ರಾಜಕೀಯ ನಿವೃತ್ತಿ ಬಗ್ಗೆ ಸದ್ದು ಮಾಡುತ್ತಿದೆ.

ರಾಯ್‌ಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಕೀಯ ನಿವೃತ್ತಿ ಬಗ್ಗೆ ನಿರ್ಧರಿಸಿದ್ದಾರೆಯೇ?ಅವರು ಇಂದು ರಾಯ್ ಪುರದಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಅಧಿವೇಶನದಲ್ಲಿ ಆಡಿರುವ ಮಾತುಗಳು ಅವರ ರಾಜಕೀಯ ನಿವೃತ್ತಿ ಬಗ್ಗೆ ಸದ್ದು ಮಾಡುತ್ತಿದೆ.

ಇತ್ತೀಚೆಗೆ ಕಾಂಗ್ರೆಸ್ ಮುಕ್ತಾಯಗೊಳಿಸಿದ ಭಾರತ್ ಜೋಡೋ ಯಾತ್ರೆಯನ್ನು ಅವರು ಪಕ್ಷಕ್ಕೆ ಮತ್ತು ತಮಗೆ ತಿರುವು ಎಂದು ಬಣ್ಣಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯೊಂದಿಗೆ ತಮ್ಮ ರಾಜಕೀಯ ಇನ್ನಿಂಗ್ಸ್ ಮುಕ್ತಾಯಗೊಳ್ಳಬಹುದೆಂದು ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಪಕ್ಷದ ಮೂರು ದಿನಗಳ ಕಾಂಗ್ರೆಸ್ ಸಮಗ್ರ ಅಧಿವೇಶನದ ಎರಡನೇ ದಿನವಾದ ಇಂದು 15,000 ಪ್ರತಿನಿಧಿಗಳನ್ನು ಉದ್ದೇಶಿಸಿ ಸೋನಿಯಾ ಗಾಂಧಿ ಮಾತನಾಡಿದರು. "ನನಗೆ ಅತ್ಯಂತ ಸಂತೋಷಕರ ಸಂಗತಿಯೆಂದರೆ, ನನ್ನ ಇನ್ನಿಂಗ್ಸ್ ಭಾರತ್ ಜೋಡೋ ಯಾತ್ರೆಯೊಂದಿಗೆ ಮುಕ್ತಾಯವಾಗಬಹುದು. ಯಾತ್ರೆಯು ಒಂದು ಮಹತ್ವದ ತಿರುವು ನೀಡಿದೆ. ಭಾರತದ ಜನರು ಅಗಾಧವಾಗಿ ಸಾಮರಸ್ಯ, ಸಹಿಷ್ಣುತೆ ಮತ್ತು ಸಮಾನತೆಯನ್ನು ಬಯಸುತ್ತಾರೆ ಎಂಬುದು ಭಾರತ್ ಜೋಡೋ ಯಾತ್ರೆಯಿಂದ ಸಾಬೀತಾಗಿದೆ ಎಂದರು.

ಜನಸಂಪರ್ಕ ಕಾರ್ಯಕ್ರಮಗಳ ಮೂಲಕ ನಮ್ಮ ಪಕ್ಷ ಮತ್ತು ಜನರ ನಡುವಿನ ಸಂವಾದದ ಶ್ರೀಮಂತ ಪರಂಪರೆಯನ್ನು ಭಾರತ್ ಜೋಡೋ ನವೀಕರಿಸಿದೆ. ಕಾಂಗ್ರೆಸ್ ಜನರೊಂದಿಗೆ ನಿಂತಿದೆ ಮತ್ತು ಅವರಿಗಾಗಿ ಹೋರಾಡಲು ಸಿದ್ಧವಾಗಿದೆ ಎಂಬುದನ್ನು ಇದು ನಮಗೆ ತೋರಿಸಿದೆ ಎಂದು ಅವರು ಹೇಳಿದರು.

"ಯಾತ್ರೆಗಾಗಿ ಶ್ರಮಿಸಿದ ಎಲ್ಲಾ ಪಕ್ಷದ ಕಾರ್ಯಕರ್ತರನ್ನು ನಾನು ಅಭಿನಂದಿಸುತ್ತೇನೆ. ಯಾತ್ರೆಯ ಯಶಸ್ಸಿನಲ್ಲಿ ಅವರ ಸಂಕಲ್ಪ ಮತ್ತು ನಾಯಕತ್ವವು ನಿರ್ಣಾಯಕರಾಗಿದ್ದ ರಾಹುಲ್ ಗಾಂಧಿಯವರಿಗೆ ನಾನು ವಿಶೇಷವಾಗಿ ಧನ್ಯವಾದ ಹೇಳುತ್ತೇನೆ ಎಂದರು. 

ನಿವೃತ್ತಿ ಸುಳಿವು ನೀಡಿದರೇ?: 76ರ ಹರೆಯದ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ನಿವೃತ್ತಿಯ ಸುಳಿವು ನೀಡಿದ್ದು, ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಮತ್ತೊಮ್ಮೆ ಸಂಸತ್‌ಗೆ ಸ್ಪರ್ಧಿಸುವರೇ ಅಥವಾ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಸ್ಥಾನವನ್ನು ಬಿಟ್ಟುಕೊಡುವರೇ ಎಂದು ಜನರು ಊಹಿಸುತ್ತಿದ್ದಾರೆ.

ಪ್ರಸ್ತುತ ಅವಧಿಯನ್ನು ಕಾಂಗ್ರೆಸ್ ಮತ್ತು ದೇಶಕ್ಕೆ "ವಿಶೇಷವಾಗಿ ಸವಾಲಿನ ಸಮಯ" ಎಂದು ಕರೆದ ಸೋನಿಯಾ ಗಾಂಧಿ, ಪ್ರಧಾನಿ ಮೋದಿ ಮತ್ತು ಬಿಜೆಪಿ-ಆರ್‌ಎಸ್‌ಎಸ್ ಆಡಳಿತವು ಪ್ರತಿಯೊಂದು ಸಂಸ್ಥೆಯನ್ನು ಪಟ್ಟುಬಿಡದೆ ವಶಪಡಿಸಿಕೊಂಡಿದೆ ಮತ್ತು ಬುಡಮೇಲು ಮಾಡಿದೆ ಎಂದು ಹೇಳಿದರು.

ಆಡಳಿತ ಪಕ್ಷ ಬಿಜೆಪಿ ಕೆಲವು ಉದ್ಯಮಿಗಳಿಗೆ ಒಲವು ತೋರುವ ಮೂಲಕ ಆರ್ಥಿಕ ವಿನಾಶವನ್ನು ಉಂಟುಮಾಡಿದೆ. ಅತ್ಯಂತ ದುಃಖಕರವೆಂದರೆ, ಭಾರತೀಯರ ವಿರುದ್ಧ ಭಯ ಮತ್ತು ದ್ವೇಷದ ಬೆಂಕಿಯನ್ನು ಉತ್ತೇಜಿಸುತ್ತದೆ" ಎಂದು ಅವರು ಹೇಳಿದರು. ಇಂದು ಅಲ್ಪಸಂಖ್ಯಾತರನ್ನು ಗುರಿಯಾಗಿಸಲಾಗುತ್ತಿದೆ. ಮಹಿಳೆಯರ ವಿರುದ್ಧ, ದಲಿತರ ವಿರುದ್ಧ ಮತ್ತು ಆದಿವಾಸಿಗಳ ವಿರುದ್ಧದ ಅಪರಾಧಗಳು ಮತ್ತು ತಾರತಮ್ಯವನ್ನು ಬಿಜೆಪಿ ನಿರ್ಲಕ್ಷಿಸಿದೆ. ಇದು ಗಾಂಧೀಜಿಯನ್ನು ಅಪಹಾಸ್ಯ ಮಾಡಿದೆ. ಅವರ ಮಾತುಗಳು ಮತ್ತು ಕಾರ್ಯಗಳ ಮೂಲಕ ನಮ್ಮ ಮೌಲ್ಯಗಳು ಮತ್ತು ನಮ್ಮ ಸಂವಿಧಾನದ ತಿರಸ್ಕಾರವನ್ನು ತೋರಿಸುತ್ತಿದೆ ಎಂದು ಆರೋಪಿಸಿದರು. 

ಇಂದಿನ ಪರಿಸ್ಥಿತಿಯು ತಾನು ರಾಜಕೀಯಕ್ಕೆ ಪ್ರವೇಶಿಸಿದ ಸಮಯವನ್ನು ನೆನಪಿಸುತ್ತದೆ ಎಂದು ಹೇಳಿದರು. "ಆಗ, ಈಗಿನಂತೆ, ನಾವು ಮುಂದೆ ಕಠಿಣ ಹೋರಾಟವನ್ನು ಎದುರಿಸಿದ್ದೇವೆ. ಈ ನಿರ್ಣಾಯಕ ಸಮಯದಲ್ಲಿ, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ಪಕ್ಷ ಮತ್ತು ದೇಶದ ಬಗ್ಗೆ ವಿಶೇಷ ಜವಾಬ್ದಾರಿಯನ್ನು ಹೊಂದಿದ್ದೇವೆ ಎಂದರು.

"ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷವಲ್ಲ, ನಾವು ಭಾರತದ ಜನರು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ನ್ಯಾಯಕ್ಕಾಗಿ ಹೋರಾಡುವ ವಾಹನದಂತೆ ಕೆಲಸ ಮಾಡುತ್ತಿದ್ದೇವೆ. ಮುಂದಿನ ಹಾದಿ ಸುಲಭವಲ್ಲ, ಆದರೆ ನನ್ನ ಅನುಭವವು ಹೇಳುತ್ತದೆ ಗೆಲುವು ನಮ್ಮದೇ ಆಗಿರುತ್ತದೆ ಎಂದರು. 

ಕಾಂಗ್ರೆಸ್‌ನ 85 ನೇ ಸರ್ವಸದಸ್ಯರ ಅಧಿವೇಶನದಲ್ಲಿ 2024 ರ ಲೋಕಸಭೆ ಚುನಾವಣೆಗೆ ಇತರ ವಿರೋಧ ಪಕ್ಷಗಳೊಂದಿಗೆ ಮೈತ್ರಿ ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಅಧಿವೇಶನದ ಮೊದಲ ದಿನವಾದ ನಿನ್ನೆ ಕಾಂಗ್ರೆಸ್ ಉಸ್ತುವಾರಿ ಸಮಿತಿಯು ಪಕ್ಷದ ಉನ್ನತ ಮಂಡಳಿಯಾದ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸದಿರಲು ನಿರ್ಧರಿಸಿತು ಮತ್ತು ಅದರ ಸದಸ್ಯರನ್ನು ನಾಮನಿರ್ದೇಶನ ಮಾಡಲು ಪಕ್ಷದ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT