ಸಾಂದರ್ಭಿಕ ಚಿತ್ರ 
ದೇಶ

ಇಂದೋರ್: ಕಾಲೇಜು ಪ್ರಾಂಶುಪಾಲರಿಗೆ ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ; ಚಿಕಿತ್ಸೆಗೆ ಸ್ಪಂದಿಸದೆ ಸಾವು

ಫೆಬ್ರುವರಿ 20 ರಂದು ಮಾಜಿ ವಿದ್ಯಾರ್ಥಿಯಿಂದ ಬೆಂಕಿ ಹಚ್ಚಿಸಿಕೊಂಡು ಶೇ 80 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಇಂದೋರ್‌ನ ಖಾಸಗಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರು ಶನಿವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಭೋಪಾಲ್: ಫೆಬ್ರುವರಿ 20 ರಂದು ಮಾಜಿ ವಿದ್ಯಾರ್ಥಿಯಿಂದ ಬೆಂಕಿ ಹಚ್ಚಿಸಿಕೊಂಡು ಶೇ 80 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಇಂದೋರ್‌ನ ಖಾಸಗಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರು ಶನಿವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವರದಿಗಳ ಪ್ರಕಾರ, ವಿಮುಕ್ತ ಶರ್ಮಾ ಅವರ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದ ವೈದ್ಯರ ತಂಡವು ಮುಂಜಾನೆ 4 ಗಂಟೆಗೆ ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

54 ವರ್ಷದ ಪ್ರಾಂಶುಪಾಲರು ಮನೆಗೆ ತೆರಳುವ ವೇಳೆ ಬಿಎಂ ಫಾರ್ಮಸಿ ಕಾಲೇಜು ಆವರಣದಲ್ಲಿ ಈ ಘಟನೆ ನಡೆದಿದೆ.

ಈ ನಡುವೆ ಆರೋಪಿ ಅಶುತೋಷ್ ಶ್ರೀವಾಸ್ತವ (24) ಆಕೆಯ ಬಳಿ ಬಂದು ತನ್ನ ಅಂಕಪಟ್ಟಿ ನೀಡಲು ವಿಳಂಬ ಮಾಡಿದ್ದಕ್ಕೆ ಕೆಲಕಾಲ ವಾಗ್ವಾದ ನಡೆಸಿ, ಆಕೆಯ ಮೇಲೆ ಪೆಟ್ರೋಲ್ ಸುರಿದು ಸಿಗರೇಟ್ ಲೈಟರ್‌ನಿಂದ ಸುಟ್ಟು ಹಾಕಿದ್ದಾನೆ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಶ್ರೀವಾಸ್ತವ್‌ನನ್ನು ಬಂಧಿಸಲಾಗಿತ್ತು.

ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಪ್ರಾಂಶುಪಾಲರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ವಿದ್ಯಾರ್ಥಿಯು 7 ನೇ ಸೆಮಿಸ್ಟರ್‌ನಲ್ಲಿ ಅನುತ್ತೀರ್ಣನಾಗಿರುವುದು ತಿಳಿದುಬಂದಿದೆ. ನಾವು ಈಗಾಗಲೇ ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಇಂದೋರ್ ಗ್ರಾಮಾಂತರ) ಭಗವತ್ ಸಿಂಗ್ ವಿರ್ಡೆ ಹೇಳಿದ್ದಾರೆ.

ಇಂದೋರ್ ಜಿಲ್ಲಾಧಿಕಾರಿ ಇಳಯರಾಜ ಟಿ ಹೊರಡಿಸಿದ ಆದೇಶದಂತೆ ಶ್ರೀವಾಸ್ತವ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿ ಪ್ರಕರಣ ದಾಖಲಿಸಲಾಗಿದೆ.

ತನಿಖೆ ಸಮಯದಲ್ಲಿ, ಶ್ರೀವಾಸ್ತವ ವಿರುದ್ಧ ಫಾರ್ಮಸಿ ಕಾಲೇಜು ಅಧಿಕಾರಿಗಳು, ಮಹಿಳಾ ಪ್ರಾಂಶುಪಾಲರು ಮತ್ತು ಇತರ ಸಿಬ್ಬಂದಿಯಿಂದ ಎರಡ್ಮೂರು ದೂರುಗಳು ಕೇಳಿಬಂದಿವೆ. ಆರೋಪಿ ಆತ್ಮಹತ್ಯೆ ಬೆದರಿಕೆ ಹಾಕುತ್ತಿದ್ದನು ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT