ಮಲ್ಲಿಕಾರ್ಜುನ್ ಖರ್ಗೆ 
ದೇಶ

ಲೋಕಸಭೆ ಚುನಾವಣೆ: ಬಿಜೆಪಿ ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿಗಾಗಿ ಕಾಂಗ್ರೆಸ್ ಎದುರು ನೋಡುತ್ತಿದೆ- ಮಲ್ಲಿಕಾರ್ಜುನ ಖರ್ಗೆ

2024ರ ಲೋಕಸಭೆ ಚುನಾವಣೆಯಲ್ಲಿ 'ಜನ ವಿರೋಧಿ' ಬಿಜೆಪಿ ಸರ್ಕಾರವನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಕಾರ್ಯಸಾಧ್ಯವಾದ ಪರ್ಯಾಯವನ್ನು ರೂಪಿಸಲು ಕಾಂಗ್ರೆಸ್ ಎದುರು ನೋಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ.

ರಾಯಪುರ: 2024ರ ಲೋಕಸಭೆ ಚುನಾವಣೆಯಲ್ಲಿ 'ಜನ ವಿರೋಧಿ' ಬಿಜೆಪಿ ಸರ್ಕಾರವನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಕಾರ್ಯಸಾಧ್ಯವಾದ ಪರ್ಯಾಯವನ್ನು ರೂಪಿಸಲು ಕಾಂಗ್ರೆಸ್ ಎದುರು ನೋಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ.

ಕಾಂಗ್ರೆಸ್‌ನ 85ನೇ ಸರ್ವಸದಸ್ಯರ ಮಹಾಧಿವೇಶನದಲ್ಲಿ ಮಾತನಾಡಿದ ಖರ್ಗೆ, ದೇಶವು ಸಾಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲಿನ ನಿರಂತರ ದಾಳಿ, ಚೀನಾ ಗಡಿಯಲ್ಲಿ ರಾಷ್ಟ್ರೀಯ ಭದ್ರತೆಯ ಸಮಸ್ಯೆಗಳು, ಸಾರ್ವಕಾಲಿಕ ಅಧಿಕ ಹಣದುಬ್ಬರ ಮತ್ತು ದಾಖಲೆಯ ನಿರುದ್ಯೋಗದಂತಹ ಸವಾಲುಗಳನ್ನು ಎದುರಿಸುತ್ತಿದೆ ಎಂದು ಹೇಳಿದರು.

'ಸದ್ಯ ಚಾಲ್ತಿಯಲ್ಲಿರುವ ಕಠಿಣ ಪರಿಸ್ಥಿತಿಯಲ್ಲಿ, ಸಮರ್ಥ ಮತ್ತು ನಿರ್ಣಾಯಕ ನಾಯಕತ್ವವನ್ನು ನೀಡಬಲ್ಲ ಏಕೈಕ ಪಕ್ಷ ಕಾಂಗ್ರೆಸ್ ಎಂದು ಪ್ರತಿಪಾದಿಸಿದ ಅವರು, 2004 ರಿಂದ 2014 ರವರೆಗೆ ಸಮಾನ ಮನಸ್ಕ ಪಕ್ಷಗಳೊಂದಿಗೆ ಕಾಂಗ್ರೆಸ್ ನೇತೃತ್ವದ ಮೈತ್ರಿ ದೇಶದ ಜನತೆಗೆ ಸೇವೆ ಸಲ್ಲಿಸಿದೆ ಎಂದು ಖರ್ಗೆ ಹೇಳಿದರು.

ಜನವಿರೋಧಿ ಮತ್ತು ಪ್ರಜಾಸತ್ತಾತ್ಮಕವಲ್ಲದ ಬಿಜೆಪಿ ಸರ್ಕಾರವನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ನಾವು ಮತ್ತೊಮ್ಮೆ ಸಮರ್ಥ ಪರ್ಯಾಯವನ್ನು ರೂಪಿಸಲು ಎದುರು ನೋಡುತ್ತಿದ್ದೇವೆ ಎಂದರು.

ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ದೆಹಲಿಯಲ್ಲಿ ಕುಳಿತಿರುವವರ ಡಿಎನ್‌ಎ 'ಬಡವರ ವಿರೋಧಿ'ಯಾಗಿದೆ. ಏಕೆಂದರೆ, ಅವರು ಪ್ರಜಾಪ್ರಭುತ್ವವನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ, ದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ವಿರುದ್ಧ ಜನಾಂದೋಲನಕ್ಕೆ ಕರೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ತಮ್ಮನ್ನು 'ಪ್ರಧಾನ ಸೇವಕ' ಎಂದು ಕರೆದುಕೊಳ್ಳುವವರು ತಮ್ಮ 'ಸ್ನೇಹಿತರ' ಹಿತಾಸಕ್ತಿಗಳನ್ನು ಪೂರೈಸುತ್ತಿದ್ದಾರೆ ಎಂದು ಆರೋಪಿಸಿದರು.

ಪಕ್ಷದ ಸರ್ವಸದಸ್ಯರ ಮಹಾಧಿವೇಶನವನ್ನುದ್ದೇಶಿಸಿ ಮಾತನಾಡಿದ ಖರ್ಗೆ, 'ಭಾರತದಲ್ಲಿ ಪ್ರಜಾಪ್ರಭುತ್ವವನ್ನು ನಾಶಮಾಡುವ ಷಡ್ಯಂತ್ರವಿದೆ. ಆದರೆ, ಕಾಂಗ್ರೆಸ್ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡುತ್ತಿದೆ.  ನೋಟು ಅಮಾನ್ಯೀಕರಣ, ಜಿಎಸ್‌ಟಿ ಜಾರಿ ಮತ್ತು ಸಾಂವಿಧಾನಿಕ ಮೌಲ್ಯಗಳ ಮೇಲಿನ ನಿರಂತರ ದಾಳಿಯಂತಹ ಕ್ರಮಗಳಿಗಾಗಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ದೂಷಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT