ವಿ.ಡಿ ಸಾವರ್ಕರ್ 
ದೇಶ

ಕರೆನ್ಸಿ ನೋಟುಗಳಲ್ಲಿ ಗಾಂಧಿ ಬದಲಿಗೆ ಸಾವರ್ಕರ್ ಫೋಟೋ ಹಾಕಿ: ಹಿಂದೂ ಮಹಾಸಭಾ ಒತ್ತಾಯ

ಕರೆನ್ಸಿ ನೋಟುಗಳ ಮೇಲಿನ ಮಹಾತ್ಮ ಗಾಂಧಿ ಫೋಟೋ ತೆಗೆದು ವಿಡಿ ಸಾವರ್ಕರ್ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಭಾನುವಾರ ಒತ್ತಾಯಿಸಿದೆ.

ಮೀರತ್: ಕರೆನ್ಸಿ ನೋಟುಗಳ ಮೇಲಿನ ಮಹಾತ್ಮ ಗಾಂಧಿ ಫೋಟೋ ತೆಗೆದು ವಿಡಿ ಸಾವರ್ಕರ್ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಭಾನುವಾರ ಒತ್ತಾಯಿಸಿದೆ.

ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿರುವ ಹಿಂದೂ ಮಹಾಸಭಾ, ಸಂಸತ್ ಭವನಕ್ಕೆ ಹೋಗುವ ರಸ್ತೆಗೆ ಸಾವರ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡುವಂತೆ ಕೇಳಿಕೊಂಡಿದೆ. ಇದು ಮೋದಿ ಸರ್ಕಾರದಿಂದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂ ಮಹಾಸಭಾದ ಮಾಜಿ ಅಧ್ಯಕ್ಷ ಸಾವರ್ಕರ್ ಅವರಿಗೆ ನೀಡಲಿರುವ ನಿಜವಾದ ಗೌರವವಾಗಿದೆ ಎಂದು ಮಹಾಸಭಾ ಮುಖಂಡರು ಹೇಳಿದ್ದಾರೆ. 

ಶಾರದಾ ರಸ್ತೆಯಲ್ಲಿರುವ ಅಖಿಲ ಭಾರತ ಹಿಂದೂ ಮಹಾಸಭಾದ ಕಚೇರಿಯಲ್ಲಿ ಸಾವರ್ಕರ್ ಅವರ 58ನೇ ಪುಣ್ಯತಿಥಿಯನ್ನು ಭಾನುವಾರ ಹವನ ಪೂಜೆ ಹಾಗೂ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಪಂಡಿತ್ ಅಶೋಕ್ ಶರ್ಮಾ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಒಬ್ಬ ಮಹಾನ್ ಕ್ರಾಂತಿಕಾರಿ ಎಂದು ಬಣ್ಣಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT