ಮನೀಶ್ ಸಿಸೋಡಿಯಾ 
ದೇಶ

ಸೀಜ್ ಮಾಡಲಾಗಿದ್ದ ಸಿಸೋಡಿಯಾ ಅವರ ಕಂಪ್ಯೂಟರ್‌ನಿಂದ ಅಳಿಸಲಾದ ಫೈಲ್‌ಗಳನ್ನು ಹಿಂಪಡೆದ ಸಿಬಿಐ

ಇದೀಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪದಲ್ಲಿ ಬಂಧಿಸಲಾದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಕಂಪ್ಯೂಟರ್‌ನಿಂದ ಅಳಿಸಲಾಗಿದ್ದ ಫೈಲ್‌ಗಳು ಮತ್ತು ಡೇಟಾವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಹಿಂಪಡೆದಿದೆ.

ನವದೆಹಲಿ: ಇದೀಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪದಲ್ಲಿ ಬಂಧಿಸಲಾದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಕಂಪ್ಯೂಟರ್‌ನಿಂದ ಅಳಿಸಲಾಗಿದ್ದ ಫೈಲ್‌ಗಳು ಮತ್ತು ಡೇಟಾವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಹಿಂಪಡೆದಿದೆ.

ಜನವರಿಯಲ್ಲಿ ಸಿಬಿಐ ಕಂಪ್ಯೂಟರ್ ಅನ್ನು ವಶಪಡಿಸಿಕೊಂಡಿತ್ತು. ಕೆಲವು ಡೇಟಾವನ್ನು ಅಳಿಸಲಾಗಿದೆ ಎಂದು ಪತ್ತೆಯಾದ ನಂತರ, ಅದನ್ನು ಹಿಂಪಡೆಯಲು ಕಂಪ್ಯೂಟರ್ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿತ್ತು.

ಇದೀಗ ಫೋರೆನ್ಸಿಕ್ ವಿಭಾಗವು ಹಿಂಪಡೆದ ಡೇಟಾ ಮತ್ತು ಫೈಲ್‌ಗಳೊಂದಿಗೆ ವರದಿಯನ್ನು ಕಳುಹಿಸಿದೆ. ಈ ಫೈಲ್‌ಗಳನ್ನು ಆರಂಭದಲ್ಲಿ ವಾಟ್ಸಾಪ್ ಮೂಲಕ ಹಂಚಿಕೊಳ್ಳಲಾಗಿದೆ ಮತ್ತು ನಂತರ ಮನೀಶ್ ಸಿಸೋಡಿಯಾ ಅವರ ಕಂಪ್ಯೂಟರ್‌ನಲ್ಲಿ ಸೇವ್ ಮಾಡಲಾಗಿತ್ತು. ನಂತರ, ಇವುಗಳನ್ನು ಡಿಲೀಟ್ ಮಾಡಲಾಯಿತು ಎಂದು ಎಫ್‌ಎಸ್‌ಎಲ್ ವರದಿ ಸೂಚಿಸುತ್ತದೆ.

ಸಿಸೋಡಿಯಾ ಕಚೇರಿಯಿಂದ ಕಂಪ್ಯೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಸಿಸೋಡಿಯಾ ಅವರ ಕಚೇರಿಗೆ ಭೇಟಿ ನೀಡುವ ಮೊದಲು, ಸಿಆರ್‌ಪಿಸಿಯ ಸೆಕ್ಷನ್ 91 ರ ಅಡಿಯಲ್ಲಿ ಸಿಬಿಐ ನೋಟಿಸ್ ನೀಡಿತ್ತು. 

ಈ ಸಂಬಂಧ ಸಿಬಿಐ ಈಗಾಗಲೇ ಆರೋಪಪಟ್ಟಿ ಸಲ್ಲಿಸಿದೆ. ಒಂದು ಮೂಲದ ಪ್ರಕಾರ, ಏಜೆನ್ಸಿಯು ಈ ವಿಷಯದಲ್ಲಿ ಪೂರಕ ಚಾರ್ಜ್‌ಶೀಟ್ ಸಲ್ಲಿಸುವ ಪ್ರಕ್ರಿಯೆಯಲ್ಲಿದೆ ಮತ್ತು ಆದ್ದರಿಂದ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಲು ಅವರು ಬಯಸಿದ್ದರು.

ಸಿಸೋಡಿಯಾ ಅವರ ಕಂಪ್ಯೂಟರ್‌ನಿಂದ ಪುರಾವೆಗಳನ್ನು ವಶಪಡಿಸಿಕೊಳ್ಳಲಾಗಿದೆ. ನಮ್ಮ ಪ್ರಕರಣವು ಈಗ ಹೆಚ್ಚು ಬಲವಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಅಬಕಾರಿ ನೀತಿ ಹಗರಣದಲ್ಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ. ರಾಜ್‌ಘಾಟ್‌ಗೆ ಭೇಟಿ ನೀಡಿದ ನಂತರ 11.10 ರ ಸುಮಾರಿಗೆ ದಕ್ಷಿಣ ದೆಹಲಿಯ ಲೋಧಿ ರಸ್ತೆಯಲ್ಲಿರುವ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಪ್ರಧಾನ ಕಚೇರಿಯನ್ನು ತಲುಪಿದ ಸಿಸೋಡಿಯಾ ಅವರನ್ನು ಬಂಧಿಸುವ ಮೊದಲು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT