ಸುಪ್ರೀಂ ಕೋರ್ಟ್- ಪವನ್ ಖೇರ 
ದೇಶ

ಪ್ರಧಾನಿ ವಿರುದ್ಧ ಟೀಕೆ: ಪವನ್ ಖೇರಾ ಅವರ ಮಧ್ಯಂತರ ಜಾಮೀನನ್ನು ಮಾರ್ಚ್ 3ರವರೆಗೆ ವಿಸ್ತರಿಸಿದ ಸುಪ್ರೀಂ ಕೋರ್ಟ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ಮಾರ್ಚ್ 3ರವರೆಗೆ ವಿಸ್ತರಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ಮಾರ್ಚ್ 3ರವರೆಗೆ ವಿಸ್ತರಿಸಿದೆ.
ಈ ಪ್ರಕರಣದಲ್ಲಿ ಕಳೆದ ವಾರ ಅಸ್ಸಾಂ ಪೊಲೀಸರು ಪವನ್ ಖೇರಾ ಅವರನ್ನು ಬಂಧಿಸಿದ್ದರು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ನೇತೃತ್ವದ ತ್ರಿಸದಸ್ಯ ಪೀಠವು ಅಸ್ಸಾಂ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ರಾಜ್ಯ ಪೊಲೀಸರು ತನ್ನ ಉತ್ತರವನ್ನು ಸಲ್ಲಿಸಲು ಬಯಸಿದ್ದಾರೆ ಎಂಬ ಮನವಿಗಳನ್ನು ಗಮನಿಸಿತು.

ಉತ್ತರ ಪ್ರದೇಶದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಅವರು, ಈ ವಿಚಾರದಲ್ಲಿ ಪ್ರತಿಕ್ರಿಯೆಯನ್ನೂ ಸಲ್ಲಿಸುವುದಾಗಿ ಹೇಳಿದರು.

ಪೀಠವು ಇದನ್ನು ಗಮನಿಸಿತು ಮತ್ತು ಫೆಬ್ರುವರಿ 23 ರಂದು ಅವರಿಗೆ ನೀಡಲಾದ ಮಧ್ಯಂತರ ಜಾಮೀನು ಮುಂದಿನ ವಿಚಾರಣೆವರೆಗೂ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟಪಡಿಸುವ ಮೂಲಕ ಖೇರಾ ಅವರ ವಿಚಾರಣೆಯನ್ನು ಮಾರ್ಚ್ 3 ರಂದು ನಿಗದಿಪಡಿಸಿತು.

ಫೆಬ್ರುವರಿ 17 ರಂದು ಮುಂಬೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮೋದಿ ವಿರುದ್ಧ ಮಾಡಿದ ಟೀಕೆಗಳಿಗೆ ಸಂಬಂಧಿಸಿದಂತೆ ಖೇರಾ ಅವರನ್ನು ರಾಯಪುರಕ್ಕೆ ಹೊರಟಿದ್ದ ವಿಮಾನದಿಂದ ಇಳಿಸಿದ ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು.
ನಂತರ ಅವರಿಗೆ ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT