ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ 
ದೇಶ

ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ: ಸಿಎಂ ಕೇಜ್ರಿವಾಲ್ ಅಂಗೀಕಾರ

ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಗಳನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಗಳನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಅಬಕಾರಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ಮನೀಶ್ ಸಿಸೋಡಿಯಾ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಎಎಪಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ತಿಹಾರ್‌ ಜೈಲಿನಲ್ಲಿದ್ದಾರೆ. ಇದೀಗ ಇಬ್ಬರೂ ಸಚಿವರು ತನ್ನ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಇಬ್ಬರ ರಾಜಿನಾಮೆಯನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಈ ಇಬ್ಬರು ಸಚಿವರ ರಾಜೀನಾಮೆಗೆ ಬಿಜೆಪಿಯಿಂದ ನಿರಂತರ ಬೇಡಿಕೆ ಇತ್ತು. ಏತನ್ಮಧ್ಯೆ, ದೆಹಲಿ ಸರ್ಕಾರದಲ್ಲಿ ಈ ದೊಡ್ಡ ಪುನಾರಚನೆ ನಡೆದಿದ್ದು, ಮಾಹಿತಿ ಪ್ರಕಾರ ಮನೀಶ್ ಸಿಸೋಡಿಯಾ ಅವರ ಇಲಾಖೆಗಳನ್ನು ಕೈಲಾಶ್ ಗೆಹ್ಲೋಟ್ ಮತ್ತು ರಾಜ್ ಕುಮಾರ್ ಆನಂದ್ ಅವರಿಗೆ ನೀಡುವ ಸಾಧ್ಯತೆ ಇದೆ.

ಸಿಸೋಡಿಯಾ ಅವರು 18 ಸಚಿವಾಲಯಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದರು. ಗಮನಾರ್ಹವಾಗಿ, ಮನೀಶ್ ಸಿಸೋಡಿಯಾ ಅವರು ಶಿಕ್ಷಣ, ಹಣಕಾಸು, ಯೋಜನೆ, ಭೂಮಿ ಮತ್ತು ಕಟ್ಟಡ, ಸೇವೆಗಳು, ಪ್ರವಾಸೋದ್ಯಮ, ಕಲೆ-ಸಂಸ್ಕೃತಿ ಮತ್ತು ಭಾಷೆ, ಜಾಗೃತಿ, ಕಾರ್ಮಿಕ ಮತ್ತು ಉದ್ಯೋಗ, ಆರೋಗ್ಯ, ಕೈಗಾರಿಕೆ, ವಿದ್ಯುತ್, ಗೃಹ, ನಗರಾಭಿವೃದ್ಧಿ, ನೀರಾವರಿ ಜೊತೆಗೆ ಲೋಕೋಪಯೋಗಿ ಇಲಾಖೆಯನ್ನು ಹೊಂದಿದ್ದಾರೆ. ಪ್ರವಾಹ ನಿಯಂತ್ರಣ ಮತ್ತು ಜಲ ಇಲಾಖೆ ಸೇರಿದಂತೆ ಒಟ್ಟು 18 ಸಚಿವಾಲಯಗಳನ್ನು ಅವರು ನಿರ್ವಹಿಸುತ್ತಿದ್ದರು. 

ಅಂತೆಯೇ ಎಎಪಿ ಪಕ್ಷದಲ್ಲಿ ಸಿಸೋಡಿಯಾ ಕೇಜ್ರಿವಾಲ್ ಬಳಿಕ ಎರಡನೇ ಹಂತದ ಪ್ರಮುಖ ನಾಯಕರಾಗಿದ್ದು, ಸಚಿವ ಸತ್ಯೇಂದ್ರ ಜೈನ್ ಈಗಾಗಲೇ ಜೈಲಿನಲ್ಲಿದ್ದು, ಅಂದಿನಿಂದ ಸತ್ಯೇಂದ್ರ ಜೈನ್ ಅವರ ಇಲಾಖೆಗಳ ಕೆಲಸವನ್ನೂ ಸಿಸೋಡಿಯಾ ನಿರ್ವಹಿಸುತ್ತಿದ್ದರು. ಇದೀಗ ಅವರ ಬಂಧನದ ಹಿನ್ನಲೆಯಲ್ಲಿ ಮತ್ತು ಹಾಲಿ ಬೆಳವಣಿಗೆಗಳು ರಾಜ್ಯದಲ್ಲಿ ಆಡಳಿತಾರೂಢ ಪಕ್ಷಕ್ಕೆ ತೀವ್ರ ಮುಜುಗರಕ್ಕೀಡಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT