ಚಂದ್ರಯಾನ 3 ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿ 
ದೇಶ

ಚಂದ್ರಯಾನ-3 ಮಿಷನ್‍ನಲ್ಲಿ ಇಸ್ರೋದ ಮತ್ತೊಂದು ಸಾಧನೆ: ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿ

ಚಂದ್ರಯಾನ-3 ಮಿಷನ್ ವಿಚಾರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಒಂದು ಹೆಜ್ಜೆ ಮುಂದಡಿಯಿಟ್ಟಿದ್ದು, ಯೋಜನೆಯ ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದೆ.

ಬೆಂಗಳೂರು: ಚಂದ್ರಯಾನ-3 ಮಿಷನ್ ವಿಚಾರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಒಂದು ಹೆಜ್ಜೆ ಮುಂದಡಿಯಿಟ್ಟಿದ್ದು, ಯೋಜನೆಯ ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದೆ.

ಹೌದು..  ಚಂದ್ರಯಾನ-3 ಮಿಷನ್ ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಹಂತಕ್ಕೆ ಶಕ್ತಿ ತುಂಬುವ ಸಿಇ-20 ಕ್ರಯೋಜೆನಿಕ್ ರಾಕೇಟ್ ಎಂಜಿನ್‍ನ ಹಾರಾಟ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಇಸ್ರೋ ತಿಳಿಸಿದೆ. ಫೆ.24 ರಂದು ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‍ನ ಹೈ ಆಲ್ಟಿಟ್ಯೂಡ್ ಟೆಸ್ಟ್ ಫೆಸಿಲಿಟಿಯಲ್ಲಿ ಯೋಜಿತ ಅವಧಿಗೆ 25 ಸೆಕೆಂಡುಗಳ ಕಾಲ ನಡೆದ ಪರೀಕ್ಷೆಯಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಇಸ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಪರೀಕ್ಷೆಯ ಸಮಯದಲ್ಲಿ ಎಲ್ಲಾ ಪ್ರೊಪಲ್ಷನ್ ಪ್ಯಾರಾಮೀಟರ್‍ಗಳು ತೃಪ್ತಿಕರವಾಗಿರುವುದು ಕಂಡುಬಂದಿವೆ ಮತ್ತು ಮುನ್ನೋಟಗಳೊಂದಿಗೆ ನಿಕಟವಾಗಿ ಹೊಂದಾಣಿಕೆಯಾಗಿದೆ. ಸಂಪೂರ್ಣ-ಸಂಯೋಜಿತ ಫ್ಲೈಟ್ ಕ್ರಯೋಜೆನಿಕ್ ಹಂತವನ್ನು ಅರಿತುಕೊಳ್ಳಲು ಕ್ರಯೋಜೆನಿಕ್ ಎಂಜಿನ್ ಅನ್ನು ಪ್ರೊಪಲ್ಲೆಂಟ್ ಟ್ಯಾಂಕ್‍ಗಳು, ಸ್ಟೇಜ್ ಸ್ಟ್ರಕ್ಚರ್‍ಗಳು ಮತ್ತು ಸಂಬಂಧಿತ ದ್ರವ ರೇಖೆಗಳೊಂದಿಗೆ ಮತ್ತಷ್ಟು ಸಂಯೋಜಿಸಲಾಗುವುದು ಎಂದು ಇಸ್ರೋ ಹೇಳಿಕೆಯಲ್ಲಿ ತಿಳಿಸಿದೆ.

ಈ ವರ್ಷದ ಆರಂಭದಲ್ಲಿ ಚಂದ್ರಯಾನ-3 ಲ್ಯಾಂಡರ್ ಯು ಆರ್ ರಾವ್ ಉಪಗ್ರಹ ಕೇಂದ್ರದಲ್ಲಿ ಇಎಂಐ, ಇಎಂಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು. ಬಾಹ್ಯಾಕಾಶ ಪರಿಸರದಲ್ಲಿ ಉಪಗ್ರಹ ಉಪವ್ಯವಸ್ಥೆಗಳ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ನಿರೀಕ್ಷಿತ ವಿದ್ಯುತ್ಕಾಂತೀಯ ಮಟ್ಟಗಳೊಂದಿಗೆ ಅವುಗಳ ಹೊಂದಾಣಿಕೆಯನ್ನು ಖಚಿತಪಡಿಸಿಕೊಳ್ಳಲು ಉಪಗ್ರಹ ಕಾರ್ಯಾಚರಣೆಗಳಿಗಾ ಎಲೆಕ್ಟ್ರೋ – ಮ್ಯಾಗ್ನೆಟಿಕ್ ಇಂಟರ್ಫರೆನ್ಸ್, ಎಲೆಕ್ಟ್ರೋ – ಮ್ಯಾಗ್ನೆಟಿಕ್ ಹೊಂದಾಣಿಕೆ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಯು ಬಾಹ್ಯಾಕಾಶ ಕ್ಷೇತ್ರದ ಸಂಶೋಧನೆಗಳಲ್ಲಿ ಪ್ರಮುಖ ಮೈಲಿಗಲ್ಲು ಎಂದು ಇಸ್ರೋ ಹೇಳಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT