ಗುಂಟೂರಿನಲ್ಲಿ ಕಾಲ್ತುಳಿತ ಉಂಟಾದ ಕಾರ್ಯಕ್ರಮ 
ದೇಶ

ಚಂದ್ರಬಾಬು ನಾಯ್ಡು ರ್ಯಾಲಿಯಲ್ಲಿ ಕಾಲ್ತುಳಿತ: 3 ಸಾವು ಹಲವರಿಗೆ ಗಾಯ

ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದ ಟಿಡಿಪಿ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. 

ಗುಂಟೂರು: ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದ ಟಿಡಿಪಿ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಈ ರ್ಯಾಲಿಯಲ್ಲಿ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಭಾಗವಹಿಸಿದ್ದರು. ಘಟನೆಯಲ್ಲಿ ಹಲವು ಮಂದಿಗೆ ಗಾಯಗಳಾಗಿವೆ. 

ಒಂದು ವಾರದ ಅವಧಿಯಲ್ಲಿ ಟಿಡಿಪಿ ನಾಯಕರ ಸಾರ್ವಜನಿಕ ಸಭೆಯಲ್ಲಿ  ನಡೆದಿರುವ ಎರಡನೇ ಘಟನೆ ಇದಾಗಿದೆ. ಡಿ.28 ರಂದು ನೆಲ್ಲೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ 8 ಮಂದಿ ಸಾವನ್ನಪ್ಪಿದ್ದರು.
 
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಮೂವರು ಮಹಿಳೆಯರು ತಮ್ಮ ಜೀವಗಳನ್ನು ಕಳೆದುಕೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಚಂದ್ರಬಾಬು ನಾಯ್ಡು ಈ ಕಾರ್ಯಕ್ರಮದಲ್ಲಿ ಮುಂಬರುವ ಸಂಕ್ರಾಂತಿಗಾಗಿ ಜನತೆಗೆ ಉಡುಗೊರೆ ನೀಡಲು ಯೋಜನೆ ಹೊಂದಿದ್ದರು. ಅದರಂತೆ ಕಾರ್ಯಕ್ರಮ ಮುಕ್ತಾಯಗೊಂಡು ನಾಯ್ಡು ಅವರು ನಿರ್ಗಮಿಸಿದ ಬಳಿಕ ಉಡುಗೊರೆ ವಿತರಣೆ ಇತ್ತು, ಈ ಸಂದರ್ಭದಲ್ಲಿ ಜನತೆ ಉಡುಗೊರೆ ಪಡೆಯಲು ನುಗ್ಗಿದ್ದು, ಕಾಲ್ತುಳಿತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

ಚಂದ್ರಬಾಬು ನಾಯ್ಡು ಕಾಲ್ತುಳಿತಕ್ಕೊಳಗಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ನೆರವು ಘೋಷಿಸಿದ್ದು, ಮೃತರ ಮಕ್ಕಳಿಗೆ ಎನ್ ಟಿಆರ್ ಟ್ರಸ್ಟ್ ನ ಶೈಕ್ಷಣಿಕ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ನೀಡುವುದಾಗಿ ಘೋಷಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT