ಸಾಂದರ್ಭಿಕ ಚಿತ್ರ 
ದೇಶ

ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದ ವೃದ್ಧಾಶ್ರಮದಲ್ಲಿ ಬೆಂಕಿ ಅವಘಡ; ಇಬ್ಬರು ಸಾವು

ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿನ ವೃದ್ಧಾಶ್ರಮದಲ್ಲಿ ಭಾನುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿನ ವೃದ್ಧಾಶ್ರಮದಲ್ಲಿ ಭಾನುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಜಾನೆ 5.14ರ ವೇಳೆಗೆ ಅಂಟಾರಾ ಕೇರ್ ಫಾರ್ ಸೀನಿಯರ್ಸ್ ವೃದ್ಧಾಶ್ರಮದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ.

ಐದು ಅಗ್ನಿಶಾಮಕ ವಾಹನಗಳು ಮತ್ತು ಕೆಲವು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿದ್ದು, ಬೆಳಿಗ್ಗೆ 6.50ರ ಹೊತ್ತಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ಸಹಾಯ ಮಾಡಿದ ಪೊಲೀಸರ ಪ್ರಕಾರ, ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ನಂದಿಸಿದ ಬಳಿಕ ಮೂರನೇ ಮಹಡಿಯಲ್ಲಿ ಸಂಪೂರ್ಣ ಸುಟ್ಟ ಎರಡು ಶವಗಳು ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪರಾಧ ಮತ್ತು ಎಫ್‌ಎಸ್‌ಎಲ್ ತಂಡಗಳನ್ನು ಸ್ಥಳಕ್ಕೆ ಕರೆಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ತಿಳಿಸಿದ್ದಾರೆ.

ಒಬ್ಬ ಹಿರಿಯ ನಾಗರಿಕನನ್ನು ಮ್ಯಾಕ್ಸ್ ಆಸ್ಪತ್ರೆ ಸಾಕೇತ್‌ಗೆ ಮತ್ತು ಇತರ 12 ಜನರನ್ನು ಅಂಟಾರಾ ಕೇರ್‌ನ ಓಖ್ಲಾದಲ್ಲಿರುವ ಮತ್ತೊಂದು ಶಾಖೆಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದರು. ಈ ಬಗ್ಗೆ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT