ರಾಜಸ್ಥಾನದಲ್ಲಿ ಹಳಿ ತಪ್ಪಿದ ರೈಲು 
ದೇಶ

ರಾಜಸ್ಥಾನ: ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲಿನ 13 ಬೋಗಿಗಳು; 26 ಮಂದಿಗೆ ಗಾಯ 

ರಾಜಸ್ಥಾನದಲ್ಲಿ ಬಾಂದ್ರ-ಜೋಧ್ ಪುರ ಸೂರ್ಯನಗರಿ ಎಕ್ಸ್ ಪ್ರೆಸ್ ರೈಲಿನ 13 ಬೋಗಿಗಳು ಹಳಿ ತಪ್ಪಿದ್ದು ಪರಿಣಾಮ 26 ಮಂದಿಗೆ ಗಾಯಗಳಾಗಿವೆ.

ಜೈಪುರ: ರಾಜಸ್ಥಾನದಲ್ಲಿ ಬಾಂದ್ರ-ಜೋಧ್ ಪುರ ಸೂರ್ಯನಗರಿ ಎಕ್ಸ್ ಪ್ರೆಸ್ ರೈಲಿನ 13 ಬೋಗಿಗಳು ಹಳಿ ತಪ್ಪಿದ್ದು ಪರಿಣಾಮ 26 ಮಂದಿಗೆ ಗಾಯಗಳಾಗಿವೆ.

ಈ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಘಟನೆ ನಡೆದ ಪಾಲಿ ಬಳಿಯ ಬಾಂಗಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಕನಿಷ್ಟ 2 ಗಂಟೆಗಳ ಕಾಲ ವ್ಯತ್ಯಯವಾಗಿದೆ ಅಥವಾ ಕೆಲವು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ.

ಸಂಜೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ತೀವ್ರವಾಗಿ ಗಾಯಗೊಂಡವರಿಗೆ ರೈಲ್ವೆ ಸಚಿವರು 1 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದು, ಸಣ್ಣಪುಟ್ಟ ಗಾಯಗಳಾದವರಿಗೆ 25,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಬೆಳಿಗ್ಗೆ 3.27 ರ ವೇಳೆಗೆ 13 ಕೋಚ್ ಗಳು ಹಳಿ ತಪ್ಪಿದ್ದವು. ತಕ್ಷಣವೇ ಕಾರ್ಯಾಚರಣೆ ನಡೆಸಿ ಗಾಯಗೊಂಡಿದ್ದ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT