ಸುಪ್ರೀಂಕೋರ್ಟ್ 
ದೇಶ

ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ನ್ಯಾಯ ಸಮ್ಮತವಾಗಿದೆ: ಸುಪ್ರೀಂ ಕೋರ್ಟ್

ನೋಟುಗಳ ರದ್ದು  ತಪ್ಪಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

ನವದೆಹಲಿ: ನೋಟುಗಳ ರದ್ದು  ತಪ್ಪಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

2016ರಲ್ಲಿ ಕೇಂದ್ರ ಸರ್ಕಾರ 500 ರು. ಮತ್ತು 1000 ರು. ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿ ಘೋಷಿಸಿದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ 58 ಅರ್ಜಿಗಳ ಕುರಿತು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ.

ನ್ಯಾಯಮೂರ್ತಿ ಎಸ್‌.ಎ. ನಜೀರ್‌ ನೇತೃತ್ವದ ಐವರು ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠವು ತೀರ್ಪು ಪ್ರಕಟಿಸಿದೆ.

ಕೇಂದ್ರದ ನೋಟ್‌ ಬ್ಯಾನ್‌ ನಿರ್ಧಾರಕ್ಕೆ ಪೀಠ 4:1 ಅನುಪಾತದಲ್ಲಿ ತೀರ್ಪು ಪ್ರಕಟಿಸಿದೆ. ನೋಟು ಅಮಾನ್ಯೀಕರಣ ಮಾಡಿರುವ ಕೇಂದ್ರದ ನಿರ್ಧಾರ ಸಮ್ಮತವಾಗಿದೆ. ಆರ್‌ಬಿಐ ಒಪ್ಪಿಗೆ ಪಡೆದೇ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ತಜ್ಞರ ಸಲಹೆ ಪಡೆದು ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಭಿನ್ನಾಭಿಪ್ರಾಯದ ತೀರ್ಪು ನೀಡಿ, ನೋಟು ರದ್ದತಿಯನ್ನು ಸಂಸತ್ತಿನ ಕಾಯಿದೆಯ ಮೂಲಕ ಕಾರ್ಯಗತಗೊಳಿಸಬಹುದಿತ್ತು, ಇದು ಸರ್ಕಾರದಿಂದ ಅಲ್ಲ ಎಂದು ಹೇಳಿದ್ದಾರೆ.

ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ, ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ, ನೋಟುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ, ಸ್ವಯಂ ಯಾವುದೇ ನಿರ್ಧಾರ ತೆಗೆದುಕೊಳ್ಳುವಂತಿಲ್ಲ. ಆರ್‌ಬಿಐನ ಕೇಂದ್ರೀಯ ಮಂಡಳಿಯ ಶಿಫಾರಸುಗಳ ಅನ್ವಯ ಮಾತ್ರವೇ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳಬಹುದು. ಹೀಗಾಗಿ 2016ರಲ್ಲಿ ಕೇಂದ್ರ ಸರ್ಕಾರ ಘೋಷಿಸಿದ ಅಪನಗದೀಕರಣ ನೀತಿ ತಪ್ಪು ನಿರ್ಧಾರ ಎಂದು ವಾದಿಸಿದ್ದರು.

ಮತ್ತೊಂದೆಡೆ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದ ಕೇಂದ್ರ ಸರ್ಕಾರ, ಈ ಪ್ರಕರಣದಲ್ಲಿ ನ್ಯಾಯಾಲಯದ ಮಧ್ಯಪ್ರವೇಶ ಸರಿಯಲ್ಲ ಎಂದಿತ್ತು. ಜೊತೆಗೆ ಸಮಯವನ್ನು ಹಿಂದಕ್ಕೆ ಸರಿಸುವ, ಒಡೆದ ಮೊಟ್ಟೆಯನ್ನು ಮರುಜೋಡಿಸುವ ಇಂಥ ಯತ್ನಗಳಿಂದ ಯಾರಿಗೂ ಯಾವುದೇ ಪರಿಹಾರ ನೀಡುವುದು ಸಾಧ್ಯವಿಲ್ಲ ಎಂದಿತ್ತು. ಅಲ್ಲದೆ ನಕಲಿ ನೋಟು ತಡೆ, ಭಯೋತ್ಪಾದನೆಗೆ ಹಣ ಪೂರೈಕೆ ಜಾಲಕ್ಕೆ ಕಡಿವಾಣ, ಕಪ್ಪುಹಣ ಮತ್ತು ತೆರಿಗೆ ವಂಚನೆ ತಡೆಯಲು ಅಪನಗದೀಕರಣ ಘೋಷಿಸಲಾಗಿದೆ. ಇದು ಸಾಕಷ್ಟು ಯೋಚಿಸಿ ಕೈಗೊಂಡ ನಿರ್ಧಾರವಾಗಿತ್ತು ಎಂದು ಸ್ಪಷ್ಟಪಡಿಸಿತ್ತು.

ನೋಟು ನಿಷೇಧದಿಂದ ನಾಗರೀಕರು ಕೆಲ ಕಾಲ ಸಮಸ್ಯೆಗಳನ್ನು ಎದುರಿಸಿದ್ದರು, ಆದರೆ ದೇಶಕಟ್ಟುವ ಕೆಲಸದಲ್ಲಿ ಇದು ಅನಿವಾರ್ಯ. ಆದರೆ, ಇಂಥ ಸಮಸ್ಯೆಗಳನ್ನು ಬಳಿಕ ಲಭ್ಯ ವ್ಯವಸ್ಥೆಯ ಮೂಲಕ ಪರಿಹರಿಸಲಾಯಿತು’ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌, ನ್ಯಾಯಾಲಯಕ್ಕೆ ಮಾಹಿತಿ ನೀಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಳಗಾವಿ ಅಧಿವೇಶನ: ವಿಧಾಸಭೆ ಕಲಾಪ ಆರಂಭ; ಸಾಲುಮರದ ತಿಮ್ಮಕ್ಕ ಸೇರಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ

7ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಬಿಕ್ಕಟ್ಟು; ಬೆಂಗಳೂರಿನಲ್ಲಿ 127 ವಿಮಾನ ರದ್ದು; ಮುಂಬೈ, ದೆಹಲಿಯಲ್ಲೂ ಇದೆ ಕಥೆ!

ವಂದೇ ಮಾತರಂ 150ನೇ ವಾರ್ಷಿಕೋತ್ಸವ: ಲೋಕಸಭೆಯಲ್ಲಿಂದು ಚರ್ಚೆ, ಎಲ್ಲರ ಚಿತ್ತ ಪ್ರಧಾನಿ ಮೋದಿಯತ್ತ

ಕರ್ನಾಟಕದ 2.5 ಲಕ್ಷ ಹುದ್ದೆಗಳು ಖಾಲಿ: ಹಣಕಾಸಿನ ಒತ್ತಡ, ಕಾನೂನು ಅಡೆತಡೆಗಳು.. ಹೆಚ್ಚುತ್ತಿರುವ ಯುವಜನರ ಕೋಪ!

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ ಸಾಧ್ಯತೆ, ಅವಿಶ್ವಾಸ ನಿರ್ಣಯ ಮಂಡಿಸಲು BJP ಮುಂದು..!

SCROLL FOR NEXT