ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಯುವತಿಯನ್ನು 12 ಕಿಮೀ ಎಳೆದೊಯ್ದ ಕಾರು: ಅತ್ಯಂತ 'ಅಪರೂಪದ ಅಪರಾಧ' ಎಂದ ದೆಹಲಿ ಸಿಎಂ

ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವತಿ ಮೃತಪಟ್ಟಿದ್ದು, ಕಾರಿನಡಿ ಸಿಲುಕಿದ್ದ ಯುವತಿಯ ಶವವನ್ನು ಸುಮಾರು 12 ಕಿಲೋಮೀಟರ್‌ಗಳವರೆಗೆ ಎಳೆದೊಯ್ದ ಘಟನೆ ಅತ್ಯಂತ "ಅಪರೂಪದ" ಅಪರಾಧ ಎಂದು ದೆಹಲಿ....

ನವದೆಹಲಿ: ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವತಿ ಮೃತಪಟ್ಟಿದ್ದು, ಕಾರಿನಡಿ ಸಿಲುಕಿದ್ದ ಯುವತಿಯ ಶವವನ್ನು ಸುಮಾರು 12 ಕಿಲೋಮೀಟರ್‌ಗಳವರೆಗೆ ಎಳೆದೊಯ್ದ ಘಟನೆ ಅತ್ಯಂತ "ಅಪರೂಪದ ಅಪರಾಧ" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

ಅಪಘಾತದ ನಂತರ ಅತ್ಯಂತ ಅಮಾನವೀಯವಾಗಿ ನಡೆದುಕೊಂಡ ಅಪರಾಧಿಗಳ ವಿರುದ್ಧ ಇತರರಿಗೆ ಮಾದರಿಯಾಗುವಂತಹ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ದೆಹಲಿ ಸಿಎಂ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಒತ್ತಾಯಿಸಿದ್ದಾರೆ.

"ಕಾಂಜಾವಾಲಾದಲ್ಲಿ ನಮ್ಮ ಸಹೋದರಿಗೆ ಏನಾಯಿತು ಎಂಬುದು ತುಂಬಾ ನಾಚಿಕೆಗೇಡಿನ ಸಂಗತಿಯಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂದು ನಾನು ಭಾವಿಸುತ್ತೇನೆ" ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ, "ಅಮಾನವೀಯ" ಅಪರಾಧದಿಂದ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT