ನಟಿ ತುನಿಷಾಳ ತಾಯಿ 
ದೇಶ

ನಟಿ ತುನಿಷಾ ತಾಯಿಯೇ ಆಕೆಯ ಕತ್ತು ಹಿಸುಕಲು ಯತ್ನಿಸಿದ್ದರು: ವಕೀಲ ಆರೋಪ

ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ನಟಿ, ಮಾಡೆಲ್ ತುನಿಷಾ ಅವರ ಚಿಕ್ಕಪ್ಪನಿಗೆ ಹೆದರುತ್ತಿದ್ದಳು ಎಂದು ಆಕೆಯ ಸಾವಿನ ಪ್ರಕರಣದಲ್ಲಿ ಡಿಸೆಂಬರ್ 25 ರಿಂದ ಜೈಲಿನಲ್ಲಿರುವ ನಟ ಶೀಜಾನ್‌ ಖಾನ್‌ ಅವರ ಕುಟುಂಬಸ್ಥರು ಹೇಳಿದ್ದಾರೆ.

ಮುಂಬೈ: ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ನಟಿ, ಮಾಡೆಲ್ ತುನಿಷಾ ಅವರ ಚಿಕ್ಕಪ್ಪನಿಗೆ ಹೆದರುತ್ತಿದ್ದಳು ಎಂದು ಆಕೆಯ ಸಾವಿನ ಪ್ರಕರಣದಲ್ಲಿ ಡಿಸೆಂಬರ್ 25 ರಿಂದ ಜೈಲಿನಲ್ಲಿರುವ ನಟ ಶೀಜಾನ್‌ ಖಾನ್‌ ಅವರ ಕುಟುಂಬಸ್ಥರು ಹೇಳಿದ್ದಾರೆ.

ಕ್ರಿಸ್‌ಮಸ್ ಮುನ್ನಾದಿನ ಆತ್ಮಹತ್ಯೆ ಮಾಡಿಕೊಂಡ ಕಿರುತೆರೆ ನಟಿ ತುನಿಷಾ ಶರ್ಮಾ ಚಂಡೀಗಢದ ತನ್ನ ಚಿಕ್ಕಪ್ಪನ ಬಗ್ಗೆ ಭಯಭೀತರಾಗಿದ್ದರು. ಆಕೆಯ ಕತ್ತು ಹಿಸುಕಿ ಸಾಯಿಸುವಂತೆ ಅವರೇ ಪ್ರೇರೇಪಿಸಿದ್ದರು ಎಂದು ಶೀಜಾನ್ ವಕೀಲ ಶೈಲೇಂದ್ರ ಮಿಶ್ರಾ ಮಾಧ್ಯಮಗಳಿಗೆ ಹೇಳಿದ್ದಾರೆ. 

ಶೀಜಾನ್ ಅವರ ಸಹೋದರಿಯರು ಕೂಡಾ ತುನಿಷಾ ಬಾಲ್ಯದಿಂದಲೂ ತಾಯಿಗೆ ಹೆದರುತ್ತಿದ್ದರು. ಪ್ರತಿ ಪೈಸೆಗೂ ಬೇಡುತ್ತಿದ್ದರು. ಸಂಜೀವ್ ಕೌಶಲ್ ಹೆಸರು ಕೇಳಿದರೆ ಸಾಕು ತುನಿಷಾ ಭಯಪಡುತ್ತಿದ್ದಳ, ಸಂಜೀವ್ ಕೌಶಲ್ ಪ್ರಚೋದನೆಯಿಂದ ತುನೀಶಾಳ ತಾಯಿ ಆಕೆಯ ಫೋನ್ ಮುರಿದು ಕತ್ತು ಹಿಸುಕಲು ಪ್ರಯತ್ನಿಸಿದ್ದರು ಎಂದು ವಕೀಲ ಶೈಲೇಂದ್ರ ಮಿಶ್ರಾ ಹೇಳಿದ್ದಾರೆ.

ತುನಿಷಾ ಮತ್ತು ಸಂಜೀವ್ ಕೌಶಲ್ (ಚಂಡೀಗಢದಲ್ಲಿ ಚಿಕ್ಕಪ್ಪ) ಭಯಾನಕ ಸಂಬಂಧವನ್ನು ಹೊಂದಿದ್ದರು. ಸಂಜೀವ್ ಕೌಶಲ್ ಮತ್ತು ಆಕೆಯ ತಾಯಿ ವನಿತಾ ತುನಿಷಾಳ ಹಣಕಾಸಿನ ಮೇಲೆ ಹಿಡಿತ ಸಾಧಿಸುತ್ತಿದ್ದರು. ತುನಿಷಾ ಆಗಾಗ್ಗೆ ತನ್ನ ಸ್ವಂತ ಹಣಕ್ಕಾಗಿ ತನ್ನ ತಾಯಿಯ ಮುಂದೆ ಬೇಡುತ್ತಿದ್ದಳು ಎಂದು ಶೀಜನ್ ಖಾನ್ ಪರ ವಕೀಲರು ಹೇಳಿದರು.

"ತುನಿಷಾ ಅವರ ಚಿಕ್ಕಪ್ಪ ಎಂದು ಕರೆಯಲ್ಪಡುವ ಪವನ್ ಶರ್ಮಾ ಅವರ ಮಾಜಿ ಮ್ಯಾನೇಜರ್ ಆಗಿದ್ದರು, ನಾಲ್ಕು ವರ್ಷಗಳ ಹಿಂದೆ ಅವರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರಿಂದ ಮತ್ತು ಅವಳೊಂದಿಗೆ ಕಠೋರವಾಗಿ ವರ್ತಿಸುತ್ತಿದ್ದರು ಎಂಬ ಕಾರಣದಿಂದ ಅವರನ್ನು ವಜಾಗೊಳಿಸಲಾಗಿದೆ ಎಂದು ಮಿಶ್ರಾ ಮುಂಬೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಡಿಸೆಂಬರ್ 24 ರಂದು ವಾಸೈನಿಂದ ಟಿವಿ ಧಾರವಾಹಿಯೊಂದರ ಸೆಟ್ ನಲ್ಲಿ ತುನಿಷಾಳ ಮೃತದೇಹವನ್ನು ವಶಕ್ಕೆ ಪಡೆದ ನಂತರ ಡಿಸೆಂಬರ್ 25 ರಂದು ಶ್ರೀಜಾನ್ ಖಾನ್ ನನ್ನು ಪೊಲೀಸರು ಬಂಧಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT