ರಾಹುಲ್ ಜೊತೆಗೆ ಎಎಸ್ ದುಲಾತ್ 
ದೇಶ

ಭಾರತ್ ಜೋಡೋ ಯಾತ್ರೆ: ರಾಹುಲ್ ಜೊತೆಗೆ ''ರಾ'' ಮಾಜಿ ಮುಖ್ಯಸ್ಥ ಹೆಜ್ಜೆ

ಚಳಿಗಾಲದಿಂದ ತಾತ್ಕಾಲಿಕವಾಗಿ ವಿರಾಮ ಪಡೆದುಕೊಂಡಿದ್ದ ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ ಯಾತ್ರೆ' ಪುನರ್ ಆರಂಭವಾಗಿದೆ.

ನವದೆಹಲಿ: ಚಳಿಗಾಲದಿಂದ ತಾತ್ಕಾಲಿಕವಾಗಿ ವಿರಾಮ ಪಡೆದುಕೊಂಡಿದ್ದ ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ ಯಾತ್ರೆ' ಪುನರ್ ಆರಂಭವಾಗಿದೆ. ರಾಹುಲ್ ಗಾಂಧಿ ಅವರೊಂದಿಗೆ ಬೇಹುಗಾರಿಕಾ ಸಂಸ್ಥೆ  'ರಾ' ಮಾಜಿ ಮುಖ್ಯಸ್ಥ ಎಎಸ್ ದುಲಾತ್ ಭಾರತ್ ಜೋಡೋ ಯಾತ್ರೆ ಉತ್ತರ ಪ್ರದೇಶ ಪ್ರವೇಶಕ್ಕೂ ಮುನ್ನಾ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು. 

ಎಎಸ್ ದುಲಾತ್ ಭಾರತೀಯ ಗುಪ್ತಚರ ಸಂಸ್ಥೆಯ ಮಾಜಿ ವಿಶೇಷ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸೇವೆಯಿಂದ ನಿವೃತ್ತರಾದ ಬಳಿಕ ಪ್ರಧಾನ ಮಂತ್ರಿಗಳ ಕಾರ್ಯಾಲಯದಲ್ಲಿ ಜಮ್ಮು-ಕಾಶ್ಮೀರ ವಿಶೇಷ ಸಲಹೆಗಾರರಾಗಿ ಜನವರಿ 2000ದಿಂದ ಮೇ 2004ರವರೆಗೂ ಕಾರ್ಯ ನಿರ್ವಹಿಸಿದ್ದರು. 

ಒಂಬತ್ತು ದಿನಗಳ ವಿರಾಮದ ನಂತರ ಪುನರ್ ಆರಂಭವಾದ ಯಾತ್ರೆಯಲ್ಲಿ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಕೂಡಾ ಭಾಗವಹಿಸಿದರು. ಭಾರತ್ ಜೋಡೋ ಯಾತ್ರೆ ಇಂದು ಮಧ್ಯಾಹ್ನ ಉತ್ತರ ಪ್ರದೇಶಕ್ಕೆ ಆಗಮಿಸಿತು. ಲೊನಿ ಗಡಿಯಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಯಾತ್ರೆಗೆ ಸ್ವಾಗತ ಕೋರಿದರು.

ಭಾರತ್ ಜೋಡೋ ಯಾತ್ರೆ ಉತ್ತರ ಪ್ರದೇಶದಿಂದ ಜನವರಿ 6ಕ್ಕೆ ಹರಿಯಾಣ ತಲುಪಲಿದೆ. ಜನವರಿ 10ರವರೆಗೂ ಹರಿಯಾಣದಲ್ಲಿರುವ ಯಾತ್ರೆ  ಜನವರಿ 11 ರಿಂದ 20ರವರೆಗೂ ಪಂಜಾಬ್, ಜನವರಿ 19 ರಂದು ಹಿಮಾಚಲ ಪ್ರದೇಶ ಹಾಗೂ ಜನವರಿ 20 ರಂದು ಜಮ್ಮು-ಕಾಶ್ಮೀರಕ್ಕೆ ತಲುಪಲಿದೆ. ಜನವರಿ 30 ರಂದು ಶ್ರೀನಗರದಲ್ಲಿ ರಾಷ್ಟ್ರ ಧ್ವಜಾರೋಹಣದೊಂದಿಗೆ ಭಾರತ್ ಜೋಡೋ ಯಾತ್ರೆ ಅಂತ್ಯವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ