ಸತ್ಯೇಂದ್ರ ದಾಸ್ 
ದೇಶ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರಿಂದ ರಾಹುಲ್‌ ಗಾಂಧಿಗೆ ಪತ್ರ!

ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ರಾಹುಲ್‌ ಗಾಂಧಿ ಅವರಿಗೆ ಪತ್ರವೊಂದನ್ನು ರವಾನಿಸಿದ್ದಾರೆ.

ಅಯೋಧ್ಯೆ: ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ರಾಹುಲ್‌ ಗಾಂಧಿ ಅವರಿಗೆ ಪತ್ರವೊಂದನ್ನು ರವಾನಿಸಿದ್ದು, ತಮ್ಮ ಆಶೀರ್ವಾದ ಸದಾ ನಿಮ್ಮೊಂದಿಗಿರಲಿದೆ ಎಂದು ಹರಸಿದ್ದಾರೆ.

ರಾಹುಲ್‌ ಗಾಂಧಿ  ಅವರ ಭಾರತ್ ಜೋಡೋ ಯಾತ್ರೆಯು ಇಂದು ಉತ್ತರ ಪ್ರದೇಶ ತಲುಪಲಿದೆ. ‘ನೀವು ದೇಶಕ್ಕಾಗಿ ಮಾಡುವ ಯಾವುದೇ ಕೆಲಸ ಎಲ್ಲರಿಗೂ ಪ್ರಯೋಜನಕಾರಿ. ನನ್ನ ಆಶೀರ್ವಾದ ನಿಮ್ಮ ಮೇಲೆ ಸದಾ ಇರಲಿದೆ’ ಎಂದು ದಾಸ್ ಅವರು ಪತ್ರದಲ್ಲಿ ಬರೆದಿದ್ದಾರೆ. ಅದನ್ನು ಅವರು ಯುವ ಕಾಂಗ್ರೆಸ್ ಮುಖಂಡ ಗೌರವ್ ತಿವಾರಿ ಮೂಲಕ ಹಸ್ತಾಂತರ ಮಾಡಿದ್ದಾರೆ.

'ರಾಮನ ಆಶೀರ್ವಾದ ನಿಮ್ಮೊಂದಿಗೆ (ರಾಹುಲ್ ಗಾಂಧಿ) ಇರಲಿ‘ ಎಂದೂ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಯೋಧ್ಯೆಯ ಹನುಮಾನ್ ಗರ್ಹಿ ದೇಗುಲದ ಅರ್ಚಕ ರಾಜು ದಾಸ್, ’ಇದು ಸತ್ಯೇಂದ್ರ ದಾಸ್ ಅವರ ವೈಯಕ್ತಿಕ ಅಭಿಪ್ರಾಯ.

ಅವರ ಮಾತನ್ನು ನಾವು ಒಪ್ಪುವುದಿಲ್ಲ. ಕಾಂಗ್ರೆಸ್ ಯಾವಾಗಲೂ ಹಿಂದೂ ವಿರೋಧಿ’ ಎಂದು ಹೇಳಿದ್ದಾರೆ. 9 ದಿನಗಳ ವಿರಾಮದ ಬಳಿಕ ಭಾರತ್ ಜೋಡೊ ಯಾತ್ರೆಯು ಜ. 3ರಂದು (ಮಂಗಳವಾರ) ಪುನರಾರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಉತ್ತರ ಪ್ರದೇಶವನ್ನು ತಲುಪಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT