ಸತ್ಯೇಂದ್ರ ದಾಸ್ 
ದೇಶ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರಿಂದ ರಾಹುಲ್‌ ಗಾಂಧಿಗೆ ಪತ್ರ!

ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ರಾಹುಲ್‌ ಗಾಂಧಿ ಅವರಿಗೆ ಪತ್ರವೊಂದನ್ನು ರವಾನಿಸಿದ್ದಾರೆ.

ಅಯೋಧ್ಯೆ: ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ರಾಹುಲ್‌ ಗಾಂಧಿ ಅವರಿಗೆ ಪತ್ರವೊಂದನ್ನು ರವಾನಿಸಿದ್ದು, ತಮ್ಮ ಆಶೀರ್ವಾದ ಸದಾ ನಿಮ್ಮೊಂದಿಗಿರಲಿದೆ ಎಂದು ಹರಸಿದ್ದಾರೆ.

ರಾಹುಲ್‌ ಗಾಂಧಿ  ಅವರ ಭಾರತ್ ಜೋಡೋ ಯಾತ್ರೆಯು ಇಂದು ಉತ್ತರ ಪ್ರದೇಶ ತಲುಪಲಿದೆ. ‘ನೀವು ದೇಶಕ್ಕಾಗಿ ಮಾಡುವ ಯಾವುದೇ ಕೆಲಸ ಎಲ್ಲರಿಗೂ ಪ್ರಯೋಜನಕಾರಿ. ನನ್ನ ಆಶೀರ್ವಾದ ನಿಮ್ಮ ಮೇಲೆ ಸದಾ ಇರಲಿದೆ’ ಎಂದು ದಾಸ್ ಅವರು ಪತ್ರದಲ್ಲಿ ಬರೆದಿದ್ದಾರೆ. ಅದನ್ನು ಅವರು ಯುವ ಕಾಂಗ್ರೆಸ್ ಮುಖಂಡ ಗೌರವ್ ತಿವಾರಿ ಮೂಲಕ ಹಸ್ತಾಂತರ ಮಾಡಿದ್ದಾರೆ.

'ರಾಮನ ಆಶೀರ್ವಾದ ನಿಮ್ಮೊಂದಿಗೆ (ರಾಹುಲ್ ಗಾಂಧಿ) ಇರಲಿ‘ ಎಂದೂ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಯೋಧ್ಯೆಯ ಹನುಮಾನ್ ಗರ್ಹಿ ದೇಗುಲದ ಅರ್ಚಕ ರಾಜು ದಾಸ್, ’ಇದು ಸತ್ಯೇಂದ್ರ ದಾಸ್ ಅವರ ವೈಯಕ್ತಿಕ ಅಭಿಪ್ರಾಯ.

ಅವರ ಮಾತನ್ನು ನಾವು ಒಪ್ಪುವುದಿಲ್ಲ. ಕಾಂಗ್ರೆಸ್ ಯಾವಾಗಲೂ ಹಿಂದೂ ವಿರೋಧಿ’ ಎಂದು ಹೇಳಿದ್ದಾರೆ. 9 ದಿನಗಳ ವಿರಾಮದ ಬಳಿಕ ಭಾರತ್ ಜೋಡೊ ಯಾತ್ರೆಯು ಜ. 3ರಂದು (ಮಂಗಳವಾರ) ಪುನರಾರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಉತ್ತರ ಪ್ರದೇಶವನ್ನು ತಲುಪಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!