ವಂದೇ ಭಾರತ್ ಎಕ್ಸ್ ಪ್ರೆಸ್ 
ದೇಶ

ಬಂಗಾಳದ ಮಾಲ್ಡಾದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ: ಬಿಜೆಪಿ, ಟಿಎಂಸಿ ನಡುವೆ ವಾಗ್ವಾದ

ಬಂಗಾಳದಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ದೊರೆತ ಕೆಲವೇ ದಿನಗಳಲ್ಲಿ ಅದರ ಮೇಲೆ ಕಲ್ಲು ತೂರಾಟ ನಡೆದಿದೆ. 

ಕೋಲ್ಕತ್ತ: ಬಂಗಾಳದಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ದೊರೆತ ಕೆಲವೇ ದಿನಗಳಲ್ಲಿ ಅದರ ಮೇಲೆ ಕಲ್ಲು ತೂರಾಟ ನಡೆದಿದೆ. 

ಹೌರಾ- ನ್ಯೂ ಜಲ್ಪೈಗುರಿ ಮಾರ್ಗದಲ್ಲಿ ಈ ವಂದೇ ಭಾರತ್ ರೈಲು ಸಂಚರಿಸುತ್ತಿದ್ದು ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಕಲ್ಲು ತೂರಾಟ ನಡೆದಿದೆ.

ಈ ಘಟನೆ ಬಗ್ಗೆ ಬಿಜೆಪಿ-ಟಿಎಂಸಿ ಪರಸ್ಪರ ವಾಗ್ವಾದಕ್ಕೆ ಇಳಿದಿದ್ದು, ಬಿಜೆಪಿ ಈ ಘಟನೆ ಬಗ್ಗೆ ಎನ್ಐಎ ತನಿಖೆಗೆ ಆಗ್ರಹಿಸಿದೆ. ಟಿಎಂಸಿ ಈ ಘಟನೆಯನ್ನು ರಾಜ್ಯಕ್ಕೆ ಅವಮಾನ ಮಾಡಲು ನಡೆಸಿರುವ ಘಟನೆಯಾಗಿದೆ ಎಂದು ಆರೋಪಿಸಿದೆ. 

ಕಲ್ಲು ತೂರಾಟದ ಘಟನೆಯಲ್ಲಿ ಯಾರಿಗೂ ಹಾನಿಯುಂಟಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ 22303 ವಂದೇ ಭಾರತ್ ನ ಕೋಚ್ ನಂಬರ್ ಸಿ 13 ನ ಗಾಜು ಒಡೆದಿದ್ದು, ಘಟನೆಯ ಬಳಿಕ ರೈಲನ್ನು ನಿಲ್ಲಿಸಲಾಗಿಲ್ಲ. ನಿಗದಿಯಂತೆ ಮಾಲ್ಡಾದ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಆರ್ ಪಿಎಫ್ ಈ ಘಟನೆ ಬಗ್ಗೆ ತನಿಖೆ ನಡೆಸುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT