ರಾಹುಲ್ ಗಾಂಧಿ 
ದೇಶ

ಭಾರತ್ ಜೋಡೋ ಯಾತ್ರೆ ಕೈಗೊಂಡಿರುವುದಕ್ಕಾಗಿ ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ

ಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಶ್ಲಾಘಿಸಿರುವ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರು, ರಾಹುಲ್ ಅವರು ಕಠಿಣ ಹವಾಮಾನದ ಪರಿಸ್ಥಿತಿಯಲ್ಲೂ ನಡೆಯುತ್ತಿದ್ದಾರೆ ಮತ್ತು ಅದನ್ನು ಪ್ರಶಂಸಿಸಬೇಕು ಎಂದಿದ್ದಾರೆ.

ಅಯೋಧ್ಯ: ಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಶ್ಲಾಘಿಸಿರುವ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರು, ರಾಹುಲ್ ಅವರು ಕಠಿಣ ಹವಾಮಾನದ ಪರಿಸ್ಥಿತಿಯಲ್ಲೂ ನಡೆಯುತ್ತಿದ್ದಾರೆ ಮತ್ತು ಅದನ್ನು ಪ್ರಶಂಸಿಸಬೇಕು ಎಂದಿದ್ದಾರೆ.

ರಾಮಜನ್ಮಭೂಮಿ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಯಾತ್ರೆಗೆ ರಾಹುಲ್ ಗಾಂಧಿಯನ್ನು 'ಆಶೀರ್ವದಿಸಿದ' ಒಂದು ದಿನದ ನಂತರ ಮಂಗಳವಾರ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ ಇದೀಗ ಈ ಹೇಳಿಕೆ ನೀಡಿದ್ದಾರೆ.

ದೇಶದಲ್ಲಿ ಕಾಲ್ನಡಿಗೆಯಲ್ಲಿ ಸಾಗುತ್ತಿರುವ ಯುವಕನಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ರೈ, ಅವರ ನಡೆಯನ್ನು ಮೆಚ್ಚುತ್ತೇನೆ. ಅದರಲ್ಲಿ ತಪ್ಪೇನೂ ಇಲ್ಲ ಎಂದರು.

ಮಂಗಳವಾರ ಉತ್ತರ ಪ್ರದೇಶಕ್ಕೆ ಪ್ರವೇಶಿಸಿದ ಯಾತ್ರೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 'ನಾನು ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಆರ್‌ಎಸ್‌ಎಸ್ ಭಾರತ್ ಜೋಡೋ ಯಾತ್ರೆಯನ್ನು ಎಂದಿಗೂ ಖಂಡಿಸಿಲ್ಲ' ಎಂದು ಹೇಳಿದರು.

'ಅವರು ಈ ಕಠಿಣ ವಾತಾವರಣದಲ್ಲಿ ನಡೆಯುತ್ತಿದ್ದಾರೆ ಮತ್ತು ಇದನ್ನು ಪ್ರಶಂಸಿಸಲೇಬೇಕು. ಪ್ರತಿಯೊಬ್ಬರೂ ದೇಶದ ಯಾತ್ರೆ ಮಾಡಬೇಕು ಎಂದು ನಾನು ಹೇಳುತ್ತೇನೆ' ಎಂದು ಹೇಳಿದರು.

ರಾಮಮಂದಿರ ಟ್ರಸ್ಟ್‌ನ ಇನ್ನೊಬ್ಬ ಹಿರಿಯ ಟ್ರಸ್ಟಿ ಗೋವಿಂದ್ ದೇವ್ ಗಿರಿ ಕೂಡ ಭಾರತ್ ಜೋಡೋ ಯಾತ್ರೆಯನ್ನು ಶ್ಲಾಘಿಸಿದರು.

'ರಾಷ್ಟ್ರವು ಒಗ್ಗಟ್ಟಾಗಿ, ಸದೃಢವಾಗಿ ಮತ್ತು ಸೌಹಾರ್ದಯುತವಾಗಿ ಉಳಿಯುವಂತೆ ಆಶೀರ್ವದಿಸಬೇಕೆಂದು ಶ್ರೀರಾಮನನ್ನು ನಾನು ಪ್ರಾರ್ಥಿಸುತ್ತೇನೆ. ಭಾರತ್ ಜೋಡೋ ಯಾತ್ರೆಯು ಉತ್ತಮ ಘೋಷಣೆಯಾಗಿದ್ದು, ಭಾರತ ಒಂದಾಗಬೇಕು' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT