ಅರೆಸೇನಾಪಡೆ ಯೋಧರು 
ದೇಶ

ಭಯೋತ್ಪಾದಕ ದಾಳಿ ಬೆನ್ನಲ್ಲೇ ಜಮ್ಮು-ಕಾಶ್ಮೀರದಲ್ಲಿ 1800 ಅರೆಸೇನಾಪಡೆ ಸಿಬ್ಬಂದಿಗಳ ನಿಯೋಜನೆ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ 1,800 ಮಂದಿ ಅರೆಸೇನಾ ಪಡೆ ಯೋಧರನ್ನು ನಿಯೋಜಿಸಲು ನಿರ್ಧರಿಸಿದೆ. 

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ 1,800 ಮಂದಿ ಅರೆಸೇನಾ ಪಡೆ ಯೋಧರನ್ನು ನಿಯೋಜಿಸಲು ನಿರ್ಧರಿಸಿದೆ. 

ರಜೌರಿಯಲ್ಲಿ ಕಳೆದ ಒಂದೆರಡು ದಿನಗಳಿಂದ ನಡೆದ ಭಯೋತ್ಪಾದಕ ದಾಳಿಯಲ್ಲಿ ಹಿಂದೂ ಕುಟುಂಬಗಳನ್ನು ಟಾರ್ಗೆಟ್ ಮಾಡಿ ಹಲವರನ್ನು ಹತ್ಯೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 1,800 ಮಂದಿ ಸಿಆರ್ ಪಿಎಫ್ ಯೋಧರನ್ನು ರಜೌರಿಯಲ್ಲಿ ನಿಯೋಜಿಸಲು ನಿರ್ಧರಿಸಿದೆ.

ಹಿಂದೂಗಳ ಹತ್ಯೆಯನ್ನು ಖಂಡಿಸಿ ಜಿಲ್ಲಾಡಳಿತ ಜನರ ಸುರಕ್ಷತೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂಬ ಅಸಮಾಧಾನದೊಂದಿಗೆ ರಜೌರಿಯಲ್ಲಿ ಬೃಹತ್ ಪ್ರತಿಭಟನೆಯೂ ನಡೆದಿದೆ.

3 ದಿನಗಳಿಂದ ನೂರಾರು ಭದ್ರತಾ ಸಿಬ್ಬಂದಿಗಳು ರಜೌರಿಯಲ್ಲಿ ಹಿಂದೂ ಕುಟುಂಬಗಳ ಹತ್ಯೆಗೆ ಕಾರಣರಾದವರನ್ನು ಹುಡುಕುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸೋಮವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿ 6 ಮಂದಿಯನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದರು.

ಮತ್ತೆ ಮರು ದಿನ ನಡೆದ ಐಇಡಿ ಸ್ಫೋಟದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದರೆ, ಕನಿಷ್ಠ 5 ಮಂದಿಗೆ ಗಾಯಗಳಾಗಿತ್ತು. ಕಳೆದ 2 ವಾರಗಳಲ್ಲಿ ಹಿಂದೂಗಳನ್ನು ಗುರಿಯಾಗಿರಿಸಿಕೊಂಡು ನಡೆಯುತ್ತಿರುವ 2 ಹಾಗೂ 3 ನೇ ಘಟನೆಗಳು ಇದಾಗಿದ್ದು, ಡಿ.16 ರಂದೂ ಸಹ ಸೇನಾ ಕ್ಯಾಂಪ್ ನ ಹೊರ ಭಾಗದಲ್ಲಿ ಇಬ್ಬರು ವ್ಯಕ್ತಿಗಳನ್ನು ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT