ಅರೆಸೇನಾಪಡೆ ಯೋಧರು 
ದೇಶ

ಭಯೋತ್ಪಾದಕ ದಾಳಿ ಬೆನ್ನಲ್ಲೇ ಜಮ್ಮು-ಕಾಶ್ಮೀರದಲ್ಲಿ 1800 ಅರೆಸೇನಾಪಡೆ ಸಿಬ್ಬಂದಿಗಳ ನಿಯೋಜನೆ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ 1,800 ಮಂದಿ ಅರೆಸೇನಾ ಪಡೆ ಯೋಧರನ್ನು ನಿಯೋಜಿಸಲು ನಿರ್ಧರಿಸಿದೆ. 

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ 1,800 ಮಂದಿ ಅರೆಸೇನಾ ಪಡೆ ಯೋಧರನ್ನು ನಿಯೋಜಿಸಲು ನಿರ್ಧರಿಸಿದೆ. 

ರಜೌರಿಯಲ್ಲಿ ಕಳೆದ ಒಂದೆರಡು ದಿನಗಳಿಂದ ನಡೆದ ಭಯೋತ್ಪಾದಕ ದಾಳಿಯಲ್ಲಿ ಹಿಂದೂ ಕುಟುಂಬಗಳನ್ನು ಟಾರ್ಗೆಟ್ ಮಾಡಿ ಹಲವರನ್ನು ಹತ್ಯೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 1,800 ಮಂದಿ ಸಿಆರ್ ಪಿಎಫ್ ಯೋಧರನ್ನು ರಜೌರಿಯಲ್ಲಿ ನಿಯೋಜಿಸಲು ನಿರ್ಧರಿಸಿದೆ.

ಹಿಂದೂಗಳ ಹತ್ಯೆಯನ್ನು ಖಂಡಿಸಿ ಜಿಲ್ಲಾಡಳಿತ ಜನರ ಸುರಕ್ಷತೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂಬ ಅಸಮಾಧಾನದೊಂದಿಗೆ ರಜೌರಿಯಲ್ಲಿ ಬೃಹತ್ ಪ್ರತಿಭಟನೆಯೂ ನಡೆದಿದೆ.

3 ದಿನಗಳಿಂದ ನೂರಾರು ಭದ್ರತಾ ಸಿಬ್ಬಂದಿಗಳು ರಜೌರಿಯಲ್ಲಿ ಹಿಂದೂ ಕುಟುಂಬಗಳ ಹತ್ಯೆಗೆ ಕಾರಣರಾದವರನ್ನು ಹುಡುಕುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸೋಮವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿ 6 ಮಂದಿಯನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದರು.

ಮತ್ತೆ ಮರು ದಿನ ನಡೆದ ಐಇಡಿ ಸ್ಫೋಟದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದರೆ, ಕನಿಷ್ಠ 5 ಮಂದಿಗೆ ಗಾಯಗಳಾಗಿತ್ತು. ಕಳೆದ 2 ವಾರಗಳಲ್ಲಿ ಹಿಂದೂಗಳನ್ನು ಗುರಿಯಾಗಿರಿಸಿಕೊಂಡು ನಡೆಯುತ್ತಿರುವ 2 ಹಾಗೂ 3 ನೇ ಘಟನೆಗಳು ಇದಾಗಿದ್ದು, ಡಿ.16 ರಂದೂ ಸಹ ಸೇನಾ ಕ್ಯಾಂಪ್ ನ ಹೊರ ಭಾಗದಲ್ಲಿ ಇಬ್ಬರು ವ್ಯಕ್ತಿಗಳನ್ನು ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ