ಪಠಾಣ್ ಚಿತ್ರದ ಬೇಷರಂ ರಂಗ್ ಹಾಡಿನಲ್ಲಿ ಶಾರೂಕ್ ಖಾನ್, ದೀಪಿಕಾ ಪಡುಕೋಣೆ 
ದೇಶ

ಬೇಷರಂ ರಂಗ್ ಹಾಡು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರಬಹುದು, ತೆಗೆದು ಹಾಕಿ: ಉತ್ತರ ಪ್ರದೇಶ ಮಕ್ಕಳ ಕಲ್ಯಾಣ ಸಮಿತಿ

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯು (CWC) ಉತ್ತರ ಪ್ರದೇಶ ೇಪೊಲೀಸ್ ಮಹಾನಿರ್ದೇಶಕರಿಗೆ ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡಿನ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕುವಂತೆ ಕೇಳಿಕೊಂಡಿದೆ. 

ಲಖನೌ: ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯು (CWC) ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕರಿಗೆ ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡಿನ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕುವಂತೆ ಕೇಳಿಕೊಂಡಿದೆ. 

ಹಾಡು ಹದಿಹರೆಯದವರ ಮನಸ್ಸಿನ ಮೇಲೆ ಹಾನಿಕಾರಕ ಪರಿಣಾಮ ಬೀರಬಹುದು ಎಂದು ಮಕ್ಕಳ ಕಲ್ಯಾಣ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್‌ನ ಹಾಡು ಅದರ ಸಾಹಿತ್ಯ ಮತ್ತು ನಾಯಕಿ ಧರಿಸಿರುವ ಕೆಸರು ಕೇಸರಿ ಉಡುಪಿನಿಂದ ಈಗಾಗಲೇ ಸಾಕಷ್ಟು ವಿವಾದದಲ್ಲಿ ಮ ವಿವಾದದಲ್ಲಿ ಮುಳುಗಿದೆ.

ವಿವಾದದ ನಡುವೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಹಾಡಿನ ಬಗ್ಗೆ ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ 2015 ರ ಸೆಕ್ಷನ್ 30 (xii) ಅಡಿಯಲ್ಲಿ ಅಧಿಕಾರವನ್ನು ಬಳಸಿಕೊಂಡು ಸಿಡಬ್ಲ್ಯುಸಿ ಬಹ್ರೈಚ್ (ಮ್ಯಾಜಿಸ್ಟ್ರೇಟ್ ಬೆಂಚ್) ಸ್ವಯಂ ಪ್ರೇರಣೆಯಿಂದ ಕೇಸು ದಾಖಲಿಸಿಕೊಂಡಿದೆ. ಉತ್ತರ ಪ್ರದೇಶ ಸರ್ಕಾರವು ಹದಿಹರೆಯದವರ ಸರ್ವತೋಮುಖ ಅಭಿವೃದ್ಧಿಗಾಗಿ ಸ್ಮಾರ್ಟ್ ಫೋನ್‌ಗಳನ್ನು ಒದಗಿಸಿದೆ, ಆದರೆ ಮಕ್ಕಳು ಅಂತರ್ಜಾಲದಲ್ಲಿ ಸುಲಭವಾಗಿ ಲಭ್ಯವಿರುವ ಯಾವುದನ್ನೂ ನೋಡುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಶನಿವಾರ ಯುಪಿ ಡಿಜಿಪಿಗೆ ಪತ್ರ ಬರೆದಿದೆ. 

ಇಂತಹ ಪರಿಸ್ಥಿತಿಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಸಾಮಾಜಿಕ ಮಾಧ್ಯಮದಿಂದ ಅಶ್ಲೀಲ ವಿಷಯವನ್ನು ತೆಗೆದುಹಾಕುವುದು ಅವಶ್ಯಕ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಪತ್ರಕ್ಕೆ ಸಿಡಬ್ಲ್ಯುಸಿ ಬಹ್ರೈಚ್ ಪೀಠದ ಮುಖ್ಯಸ್ಥ ಸತೀಶ್ ಕುಮಾರ್ ಶ್ರೀವಾಸ್ತವ ಮತ್ತು ದೀಪಮಲಾ ಪ್ರಧಾನ್, ಅರ್ಚನಾ ಪಾಂಡೆ ಮತ್ತು ನವನೀತ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಸಹಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT