ಘಟನಾ ಸ್ಥಳ 
ದೇಶ

ಕಾಂಜಾವಾಲಾ ಪ್ರಕರಣ: ಕಾರಿನೊಳಗೆ ಮಹಿಳೆಯಿದ್ದ ಯಾವುದೇ ಚಿಹ್ನೆಗಳು ಕಂಡು ಬಂದಿಲ್ಲ- ಎಫ್ಎಸ್ಎಲ್

ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಮಾತುಗಳು ಕೇಳಿಬರುತ್ತಿರುವ ನಡುವಲ್ಲೇ ಕಾರಿನೊಳಗೆ ಮಹಿಳೆಯಿಂದ್ದ ಯಾವುದೇ ಚಿಹ್ನೆಗಳು ಕಂಡುಬಂದಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ಬುಧವಾರ ಸ್ಪಷ್ಟಪಡಿಸಿದೆ.

ನವದೆಹಲಿ: ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಮಾತುಗಳು ಕೇಳಿಬರುತ್ತಿರುವ ನಡುವಲ್ಲೇ ಕಾರಿನೊಳಗೆ ಮಹಿಳೆಯಿಂದ್ದ ಯಾವುದೇ ಚಿಹ್ನೆಗಳು ಕಂಡುಬಂದಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ಬುಧವಾರ ಸ್ಪಷ್ಟಪಡಿಸಿದೆ.

ಹೆಚ್ಚಿನ ರಕ್ತದ ಕಲೆಗಳು ಕಾರಿನ ಮುಂಭಾಗದ ಎಡ ಚಕ್ರದ ಹಿಂದೆ ಕಂಡುಬಂದಿದ್ದು, ಮಹಿಳೆಯು ವಾಹನದ ಮುಂಭಾಗದ ಎಡ ಚಕ್ರಕ್ಕೆ ಸಿಲುಕಿಕೊಂಡಿದ್ದಳು ಎಂದು ತಿಳಿಸಿದೆ.

ಮಹಿಳೆಯು ವಾಹನದ ಮುಂಭಾಗದ ಎಡ ಚಕ್ರಕ್ಕೆ ಸಿಲುಕಿಕೊಂಡಿದ್ದು, ಹೆಚ್ಚಿನ ರಕ್ತದ ಕಲೆಗಳು ಮುಂಭಾಗದ ಎಡ ಚಕ್ರದ ಹಿಂದೆ ಕಂಡುಬಂದಿವೆ. ಕಾರಿನ ಕೆಳಗೆ ಇತರ ಭಾಗಗಳಲ್ಲಿಯೂ ರಕ್ತದ ಕಲೆಗಳು ಕಂಡುಬಂದಿವೆ. ಆದರೆ, ಇಲ್ಲಿಯವರೆಗೆ ಕಾರಿನೊಳಗೆ ಮಹಿಳೆಯಿದ್ದ ಯಾವುದೇ ಕುರುಹುಗಳ ಪತ್ತೆಯಾಗಿಲ್ಲ ಎಂದು ಹೇಳಿದೆ.

ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವವರ ರಕ್ತದ ಮಾದರಿಯನ್ನೂ ಎಫ್ಎಸ್ಎಲ್'ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯ ಹೊರಭಾಗದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಹಲವು ಕಿಲೋಮೀಟರ್‌ಗಳವರೆಗೆ ಮಹಿಳೆಯ ದೇಹ ಎಳೆದೊಯ್ದು ಹತ್ಯೆಗೀಡಾದ 20ರ ಹರೆಯದ ಮಹಿಳೆಯ ಪ್ರಕರಣ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

ಈ ಸಂಬಂಧ ನಿನ್ನೆಯಷ್ಟೇ ಘಟನೆ ವೇಳೆ ಮಹಿಳೆ ಸ್ಕೂಟಿಯಲ್ಲಿ ಒಬ್ಬಳೇ ಇರಲಿಲ್ಲ, ಆಕೆಯ ಜೊತೆಗೆ ಸ್ನೇಹಿತೆ ಕೂಡ ಇದ್ದಳು ಎಂಬುದು ತಿಳಿದುಬಂದಿತ್ತು. ಅಪಘಾತ ಸಂಭವಿಸಿದ ಬಳಿಕ ಕೆಳಗೆ ಬಿದ್ದ ಸ್ನೇಹಿತೆಗೆ ಸಣ್ಣಪುಟ್ಟ ಗಾಯಗಳಾಗಿತ್ತು ಎಂಬುದು ತಿಳಿದುಬಂದಿತ್ತು.

ಘಟನೆ ಕುರಿತು ಪ್ರತ್ಯದರ್ಶಿಗಳು ಮಾಹಿತಿ ನೀಡಿದ್ದು, ಮಹಿಳೆ ಕಾರಿನಡಿ ಸಿಲುಕಿಕೊಂಡಿರುವುದು ಗೊತ್ತಿದ್ದರೂ ಆರೋಪಿಗಳು ವಾಹನವನ್ನು ಉದ್ದೇಶಪೂರ್ವಕವಾಗಿಯೇ ಚಲಾಯಿಸುತ್ತಿದ್ದರು ಎಂದು ಹೇಳಿದ್ದಾರೆ.

ಕಾರಿನಡಿ ಮಹಿಳೆ ಸಿಲುಕಿರುವುದು ಅವರಿಗೆ ತಿಳಿದಿತ್ತು. ಆಕೆಯನ್ನು ತೊಡೆದುಹಾಕರು ಹಿಂದೆ-ಮುಂದೆ ಕಾರು ಚಲಾಯಿಸಿದ್ದರು. ಆದರೆ, ಅಂಜಲಿಯವರ ದೇಹದ ಭಾಗ ಕಾರಿನ ಭಾಗಗಳಲ್ಲಿ ಸಿಲುಕಿಕೊಂಡಿತ್ತು. ಅಂಜಲಿಯವರು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದರು, ಆದರೆ, ಅವರು ಈ ಬಗ್ಗೆ ಗಮನಕೊಡದಂತೆ ಕಾರು ಚಲಾಯಿಸಿದ್ದರು ಎಂದು ಮೃತ ಮಹಿಳೆಯ ಸ್ನೇಹಿತೆ ನಿಧಿ ಕೂಡ ಖಾಸಗಿ ವಾಹನಿಯೊಂದರಲ್ಲಿ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT